ರತನ್ ಟಾಟಾ ನಿಧನಕ್ಕೆ ಚಿತ್ರರಂಗ ಕಂಬನಿ
ಬೆಂಗಳೂರು,10 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಖ್ಯಾತ ಉದ್ಯಮಿ, ಕರುಣಾಮಯಿ, ಅಜಾತಶತ್ರು ಎನಿಸಿಕೊಂಡಿದ್ದ ರತನ್ ಟಾಟಾ ನಿಧನವಾರ್ತೆ ಎಲ್ಲರಿಗೂ ಅಘಾತ ಉಂಟುಮಾಡಿದೆ .ರತನ್ ಟಾಟಾ ಅವರು ತಮ್ಮ ಒಳಿತಿಗಿಂತ ಸಮಾಜದ ಒಳಿತಿಗಾಗಿ ಹೆಚ್ಚು ಶ್ರಮಿಸಿದ್ದರು. ಇದಕ್ಕೆ ಚಿತ್ರರಂಗದವರು​ ಸಂತಾಪ ಸೂಚಿಸಿದ್ದಾರೆ.
Ratan Tata Death Shivarajkumar Salman Khan


ಬೆಂಗಳೂರು,10 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಖ್ಯಾತ ಉದ್ಯಮಿ, ಕರುಣಾಮಯಿ, ಅಜಾತಶತ್ರು ಎನಿಸಿಕೊಂಡಿದ್ದ ರತನ್ ಟಾಟಾ ನಿಧನವಾರ್ತೆ ಎಲ್ಲರಿಗೂ ಅಘಾತ ಉಂಟುಮಾಡಿದೆ .ರತನ್ ಟಾಟಾ ಅವರು ತಮ್ಮ ಒಳಿತಿಗಿಂತ ಸಮಾಜದ ಒಳಿತಿಗಾಗಿ ಹೆಚ್ಚು ಶ್ರಮಿಸಿದ್ದರು. ಇದಕ್ಕೆ ಚಿತ್ರರಂಗದವರು​ ಸಂತಾಪ ಸೂಚಿಸಿದ್ದಾರೆ.

ಚಿತ್ರ ರಂಗದ ಖ್ಯಾತ ನಟ ನಟಿಯರು ಸಮಾಜಿಕ ಜಾಲತಾಣದ ಮೂಲಕ ಸಂತಾಪ ಸೂಚಿಸುತ್ತಿದ್ದಾರೆ. ‘ಭಾರತದ ಹೆಮ್ಮೆಯ ಪುತ್ರ ರತನ್ ನಾವಲ್ ಟಾಟಾ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ’ ಎಂದು ಕನ್ನಡದ ಚಿತ್ರ ನಟ ಶಿವಣ್ಣ ಟ್ವೀಟ್ ಮೂಲಕ ತಮ್ಮ ಸಂತಾಪ ಸೂಚಿಸಿದ್ದಾರೆ. ‘ರತನ್ ಟಾಟಾ ನಿಧನವಾರ್ತೆ ಕೇಳಿ ದುಃಖವಾಗಿದೆ’ ಎಂದು ಹಿಂದಿ ಚಲನಚಿತ್ರ ನಟ ಸಲ್ಮಾನ್ ಖಾನ್ ಬರೆದುಕೊಂಡಿದ್ದಾರೆ.

‘ನಿಮ್ಮ ದಯೆಯಿಂದ ನೀವು ಲಕ್ಷಾಂತರ ಜನರ ಜೀವಗಳನ್ನು ತಲುಪಿದ್ದೀರಿ. ನಿಮ್ಮ ನಾಯಕತ್ವ ಮತ್ತು ಉದಾರತೆಯ ಪರಂಪರೆಯು ಮುಂದಿನ ತಲೆಮಾರಿಗೆ ಸ್ಫೂರ್ತಿ ನೀಡುತ್ತದೆ. ನಮ್ಮ ದೇಶಕ್ಕಾಗಿ ನೀವು ನೀಡಿದ ಕೊಡುಗೆ, ನಿಮ್ಮ ಸಾಟಿಯಿಲ್ಲದ ಉತ್ಸಾಹ ಮತ್ತು ಸಮರ್ಪಣೆಗಾಗಿ ಧನ್ಯವಾದಗಳು. ನೀವು ನಮಗೆಲ್ಲರಿಗೂ ಸ್ಫೂರ್ತಿಯಾಗಿದ್ದೀರಿ. ನಿಮ್ಮನ್ನು ನಾವು ನಿಮ್ಮನ್ನು ಕಳೆದುಕೊಂಡಿದ್ದೇವೆ’ ಎಂದು ಚಿತ್ರ ನಟಿ ಪ್ರಿಯಾಂಕಾ ಚೋಪ್ರಾ ಬರೆದುಕೊಂಡಿದ್ದಾರೆ.

‘ಉದ್ಯಮದ ಟೈಟಾನ್ ರತನ್ ಟಾಟಾ ಅವರ ನಿಸ್ವಾರ್ಥ ಲೋಕೋಪಕಾರ ಮತ್ತು ದೂರದೃಷ್ಟಿಯ ನಾಯಕತ್ವವು ಅಸಂಖ್ಯಾತ ಜೀವನವನ್ನು ಪರಿವರ್ತಿಸಿದೆ. ಅವರು ಶಾಂತಿಯಿಂದ ವಿಶ್ರಾಂತಿ ಪಡೆಯಲಿ’ ಎಂದು ತೆಲುಗು ಚಿತ್ರ ನಟ ಜೂನಿಯರ್ ಎನ್​ಟಿಆರ್ ಟ್ವೀಟ್ ಮಾಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande