ಕಿತ್ತೂರು ಉತ್ಸವ : ಕುನಾಲ್ ಗಾಂಜಾವಾಲಾ, ಸಾಧು ಕೋಕಿಲ ರಸಮಂಜರಿ
ಬೆಳಗಾವಿ,17 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕಿತ್ತೂರು ಉತ್ಸವ ಹಾಗೂ ಚೆನ್ನಮ್ಮನ ವಿಜಯೋತ್ಸವದ 200 ವರ್ಷಾಚರಣೆ ಹಿನ್ನೆಲೆಯಲ್ಲಿ ಇದೇ ಪ್ರಥಮ‌ ಬಾರಿಗೆ ಕುಂದಾ ನಗರಿಯಲ್ಲೂ ರಸಮಂಜರಿ ಹಾಗೂ ನೃತ್ಯ ಕಾರ್ಯಕ್ರಮಗಳನ್ನು‌ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. ರಾಷ್ಟ
celebrating-200th-years-of-kittur-rani-chennamma-


ಬೆಳಗಾವಿ,17 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕಿತ್ತೂರು ಉತ್ಸವ ಹಾಗೂ ಚೆನ್ನಮ್ಮನ ವಿಜಯೋತ್ಸವದ 200 ವರ್ಷಾಚರಣೆ ಹಿನ್ನೆಲೆಯಲ್ಲಿ ಇದೇ ಪ್ರಥಮ‌ ಬಾರಿಗೆ ಕುಂದಾ ನಗರಿಯಲ್ಲೂ ರಸಮಂಜರಿ ಹಾಗೂ ನೃತ್ಯ ಕಾರ್ಯಕ್ರಮಗಳನ್ನು‌ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.

ರಾಷ್ಟ್ರ ಮಟ್ಟದ ಪ್ರಖ್ಯಾತ ಗಾಯಕ ಕುನಾಲ್ ಗಾಂಜಾವಾಲಾ ಅವರು ಕಿತ್ತೂರು ಉತ್ಸವದ ಹಿಂದಿನ ದಿನವಾದ ಅ.22 ರಂದು ಸಂಜೆ 4 ಗಂಟೆಗೆ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ರಸಮಂಜರಿ ನಡೆಸಿಕೊಡಲಿದ್ದಾರೆ.

ಅದೇ ವೇದಿಕೆಯಲ್ಲಿ ಕನ್ನಡದ ಖ್ಯಾತ ಹಾಸ್ಯ ಕಲಾವಿದ, ಸಂಗೀತ ನಿರ್ದೇಶಕ ಸಾಧು ಕೋಕಿಲ್ ಅವರು ಮತ್ತು ಜೀ ಕನ್ನಡ ಸರಿಗಮಪ ತಂಡದವರು ಕಾರ್ಯಕ್ರಮವನ್ನು ಪ್ರಸ್ತುತಪಡಿಸಲಿದ್ದಾರೆ.

ಆಕ್ಸಿಜೆನ್ ಡ್ಯಾನ್ಸ್ ಗ್ರೂಪ್ ವತಿಯಿಂದ ನೃತ್ಯ; ರೇಖಾ ಹೆಗಡೆ ಮತ್ತು ತಂಡದವರಿಂದ ನೃತ್ಯ ರೂಪಕ; ಪ್ರಕಾಶ್ ಚಂದನ್ನವರ ತಂಡದಿಂದ ಜೋಗತಿ ನೃತ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಎಲ್ಲರಿಗೂ ಉಚಿತ ಪ್ರವೇಶವಿದ್ದು, ಯುವಕ-ಯುವತಿಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿಕೊಂಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande