ಧಾರವಾಡ, 18 ಅಕ್ಟೋಬರ್ (ಹಿ.ಸ.)
ಆ್ಯಂಕರ್:ರಾಜ್ಯಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಬಾಲಕ ಬಾಲಕಿಯರ ೨೦೨೪-೨೫ ನೇ ಸಾಲಿನ ಟೆಕ್ವಾಂಡೋ ಪಂದ್ಯಾವಳಿಯಲ್ಲಿ ಧಾರವಾಡ ಜಿಲ್ಲೆ ಬಾಲಕ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಜಿಲ್ಲೆಯ ಅಳ್ನಾವರ ತಾಲೂಕಿನ ಹೊನ್ನಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಬಸವರಾಜ ಕಮ್ಮಾರ ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಗ್ರಾಮದ ಮುರತುಜಾ ಮುಲ್ಲಾ ಎಂಬುವವರು ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ನಡೆಸುವ ಟೆಕ್ವಾಂಡೋ ಶಿಬಿರದಲ್ಲಿ ತರಬೇತಿ ಪಡೆದಿದ್ದಾನೆ. ಬಾಲಕನ ಈ ಸಾಧನೆಗೆ ಶಾಲಾ ಸಿಬ್ಬಂದಿ ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa