ಮಲಾವಿ, 18 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ರಾಷ್ಡ್ರಪತಿ ದ್ರೌಪದಿ ಮುರ್ಮು ಅವರು ತಮ್ಮ ಮೂರು ಆಫ್ರಿಕನ್ ರಾಷ್ಟ್ರಗಳ ಭಾಗವಾಗಿ ಮಲಾವಿಗೆ ಭೇಟಿ ನೀಡಿದ ಎರಡನೇ ದಿನದಂದು ಇಂದು ಮಲಾವಿ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳು ಮತ್ತು ನಿಯೋಗ ಮಟ್ಟದ ಮಾತುಕತೆಗಳನ್ನು ನಡೆಸಲಿದ್ದಾರೆ.
ರಾಷ್ಡ್ರಪತಿ ದ್ರೌಪದಿ ಮುರ್ಮು ಅವರು ಇಂದು ಮಲಾವಿ ಗಣರಾಜ್ಯದ ಅಧ್ಯಕ್ಷ ಲಾಜರಸ್ ಚಕ್ವೇರಾ ಅವರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ವಿವಿಧ ವಿಷಯಗಳ ಕುರಿತು ಇಂದು ನಿಯೋಗ ಮಟ್ಟದ ಸಭೆಗಳೂ ನಡೆಯಲಿವೆ. ರಾಷ್ಡ್ರಪತಿ ದ್ರೌಪದಿ ಮುರ್ಮು ರಾಷ್ಟ್ರೀಯ ಯುದ್ಧ ಸ್ಮಾರಕ ಮತ್ತು ಸಮಾಧಿಗೆ ಭೇಟಿ ನೀಡಲಿದ್ದಾರೆ. ಈ ನಡುವೆ ರಾಷ್ಟ್ರಪತಿಗಳು ನಿನ್ನೆ ಸಂಜೆ ಕಾರ್ಯಕ್ರಮವೊಂದರಲ್ಲಿ ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸಿದರು. ಭಾರತೀಯ ಸಮುದಾಯವು ಉತ್ತಮ ಕೆಲಸವನ್ನು ಮುಂದುವರಿಸಲು ಮತ್ತು ವಿಕಸಿತ ಭಾರತ್ನ ದೃಷ್ಟಿಯಲ್ಲಿ ಸಕ್ರಿಯ ಪಾಲುದಾರರಾಗಿರಲು ರಾಷ್ಟ್ರಪತಿಗಳು ಕರೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್