ಸಂಡೂರು, 18 ಅಕ್ಟೋಬರ್(ಹಿ.ಸ.):
ಆ್ಯಂಕರ್ : ವಿಧಾನ ಸಭಾ ಉಪ ಚುನಾವಣೆಯ ದಿನಾಂಕ ಘೋಷಣೆಯಾಗುತ್ತಿದ್ದಂತೆ ಎಲ್ಲ ಪಕ್ಷಗಳಲ್ಲೂ ಚಟಿವಟಿಕೆಗಳು ಗರಿಗೆದರಿವೆ. ಅದರಂತೆ ಸಂಡೂರು ಕ್ಷೇತ್ರದಲ್ಲೂ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ.
ಸಂಡೂರು ಕ್ಷೇತ್ರದ ಶಾಸಕರಾಗಿದ್ದ ಇ ತುಕಾರಾಂ ಅವರು ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರಿಂದ ಈಗ ಉಪ ಚುನಾವಣೆ ನಡೆಯುತ್ತಿದೆ.
ಸಂಡೂರು ಉಪಚುನಾವಣೆಯ ನಿಮಿತ್ತ ಇಂದು ಸಂಡೂರು ನಗರದಲ್ಲಿ ಗಾಲಿ ಜನಾರ್ದನ ರೆಡ್ಡಿ ಅವರು ಪತ್ನಿ ಶ್ರೀಮತಿ ಲಕ್ಷ್ಮಿ ಅರುಣ ಸಮೇತ ಪೂಜಾ ವಿಧಿ ವಿಧಾನಗಳೊಂದಿಗೆ ನೂತನ ಮನೆಯ ಗೃಹಪ್ರವೇಶ ಮಾಡಿದರು
.
ಈ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಅನಿಲ್ ನಾಯ್ಡು, ಮಾಜಿ ಶಾಸಕರಾದ ಸೋಮಶೇಖರ ರೆಡ್ಡಿ, ಎಸ್ ಟಿ ಮೋರ್ಚಾ ರಾಜ್ಯಾಧ್ಯಕ್ಷರಾದ ಬಂಗಾರ ಹನುಮಂತು, ಮಾಜಿ ಬುಡಾ ಅಧ್ಯಕ್ಷರಾದ ದಮ್ಮೂರು ಶೇಖರ್ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದರು
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್