ಬೆಂಗಳೂರು, 18 ಅಕ್ಟೋಬರ್ (ಹಿ.ಸ.)
ಆ್ಯಂಕರ್ : ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನಿಖೆ ಕೈಗೊಂಡಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಕರಣದಲ್ಲಿ ಸಿಲುಕಿಸುವ ದುರುದ್ದೇಶದಿಂದ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಇ.ಡಿ ಜನರ ವಿಶ್ವಾಸವನ್ನು ಕಳೆದುಕೊಂಡಿದೆ ಎಂದಿದ್ದಾರೆ.
ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿರುವುದನ್ನ ಖಂಡಿಸಿದ ಅವರು, ಇ.ಡಿ ಒಂದು ಸ್ವಾಯತ್ತ ಸಂಸ್ಥೆಯಾಗಿ ಕೆಲಸ ಮಾಡುತ್ತಿಲ್ಲ. ಕೇಂದ್ರದ ಕೈಗೊಂಬೆಯಾಗಿದೆ. ಕಳೆದ 10 ವರ್ಷದಲ್ಲಿ ಬಿಜೆಪಿಯವರ ಬಂಧನವಾಗಿದೆಯಾ ಎಂದು ಪ್ರಶ್ನಿಸಿರುವ ಅವರು ಪ್ರತಿ ಪಕ್ಷ ನಾಯಕರು ಏಲ್ಲಿ ಇರುತ್ತಾರೊ ಅಲ್ಲಿ ಮಾತ್ರ ಇಡಿ, ಐಟಿ ಇಲಾಖೆ ದಾಳಿ ಮಾಡುತ್ತಿವೆ ಎಂದರು. ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳನ್ನು ಸಿಲುಕಿಸುವ ವ್ಯವಸ್ಥಿತ ಸಂಚು ನಡೆದಿದೆ ಎಂದು ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa