ಬಾಗಲಕೋಟೆ, 22 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಈರುಳ್ಳಿ ಬೆಳೆದ ರೈತರು ತತ್ತರಿಸಿದ್ದಾರೆ. ನಿರಂತರ ಮಳೆಯಿಂದಾಗಿ ಜಿಲ್ಲೆಯಲ್ಲಿ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಈರುಳ್ಳಿ ಬೆಳೆ ನೀರುಪಾಲಾಗಿದೆ. ಜಿಲ್ಲೆಯಲ್ಲಿ ಒಟ್ಟು ೩೧ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬೆಳೆ ಬೆಳೆಯಲಾಗಿತ್ತು. ಇದೀಗ ಕಟಾವಿಗೆ ಬಂದಿದ್ದ ಬೆಳೆ ಮಳೆಗೆ ಆಹುತಿಯಾಗಿದ್ದು ರೈತರು ಕಣ್ಣಿರಿಡು ಪರಿಸ್ಥಿತಿ ಉಂಟಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa