ಪುಣೆ ,22ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಕಾವು ಹೆಚ್ಚಿರುವ ಮಧ್ಯೆ ಪುಣೆ ಪೊಲೀಸರು ಬಂದೋಬಸ್ತ್ ವೇಳೆ ಕಾರ್ನಲ್ಲಿ 5 ಕೋಟಿ ಹಣವನ್ನು ವಶಕ್ಕೆ ಪಡೆದಿದ್ದಾರೆ.
ಶಿವಪುರ್ ಟೋಲ್ ಬೂತ್ನಲ್ಲಿ ಕಾರ್ನಲ್ಲಿ ಅನಾಮಧೇಯ ಹಣ ಪತ್ತೆಯಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈ ಕುರಿತು ತನಿಖೆ ಮುಂದುವರೆಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಣದ ಕುರಿತು ಮಾತನಾಡಿರುವ ಯುಬಿಟಿ ನಾಯಕ ಸಂಜಯ್ ರಾವತ್, ಹೆಸರನ್ನು ಉಲ್ಲೇಖಿಸಿದೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಟೀಕಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿರುವ ರಾವತ್, ’’ಏಕನಾಥ್ ಶಿಂಧೆ ಅವರು 75 ಕೋಟಿಯನ್ನು ಪ್ರತಿ ಶಾಸಕರಿಗೆ ಕಳುಹಿಸಿದ್ದು, ಇದು ಅದರ ಮೊದಲ ಕಂತಾಗಿದೆ‘‘ ಎಂದಿದ್ದಾರೆ.
ಮಹಾರಾಷ್ಟ್ರದಲ್ಲಿ ನವೆಂಬರ್ 20ಕ್ಕೆ ಏಕಹಂತದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾಗಿದ್ದು, ಈ ಹಿನ್ನೆಲೆ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಮುಂಬೈ - ಬೆಂಗಳೂರು ಹೆದ್ದಾರಿಯಲ್ಲಿನ ಶಿವಪುರ ಗ್ರಾಮದ ಟೊಲ್ ಬೂತ್ನಲ್ಲಿ ಪುಣೆ ಗ್ರಾಮಾಂತರ ಪೊಲೀಸರು ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್