ನವದೆಹಲಿ, 22 ಅಕ್ಟೋಬರ್(ಹಿ.ಸ.) :
ಆ್ಯಂಕರ್ : ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಭೂತಾನ್ ಪ್ರಧಾನಿ ತ್ಶೆರಿಂಗ್ ತೊಬ್ಗೇ ನಿನ್ನೆ ಸಂಜೆ ನವದೆಹಲಿಯಲ್ಲಿ ಹಸಿರು ಹೈಡ್ರೋಜನ್ ಇಂಧನ ಸೆಲ್ ಬಸ್ನಲ್ಲಿ ಸಂಚಾರ ಮಾಡಿದರು.
ಭೂತಾನ್ ಪ್ರಧಾನ ಮಂತ್ರಿಗೆ ಹಸಿರು ಹೈಡ್ರೋಜನ್ನಲ್ಲಿ ಭಾರತದ ಪ್ರಗತಿಯನ್ನು ಈ ಮೂಲಕ ಪ್ರದರ್ಶಿಸಲಾಯಿತು. ಈ ಬಸ್ ಯಾವುದೇ ಕಾರ್ಬನ್ ಡೈಆಕ್ಸೈಡ್ ಅಥವಾ ಮಾಲಿನ್ಯಕಾರಕಗಳನ್ನು ಹೊರಸೂಸುವುದಿಲ್ಲ ಮತ್ತು ಡಿಕಾರ್ಬೊನೈಸೇಶನ್ನಲ್ಲಿ ಭಾರತದ ನಾಯಕತ್ವವನ್ನು ಪ್ರತಿನಿಧಿಸುತ್ತದೆ. ಹಸಿರು ಹೈಡ್ರೋಜನ್ ಇಂಧನ ಬಸ್ನಲ್ಲಿ ಭೂತಾನ್ ಪ್ರಧಾನಿಯ ಪ್ರಯಾಣವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಸಾಮಾಜಿಕ ಮಾಧ್ಯಮದ ಪೋಸ್ಟ್ನಲ್ಲಿ, ಈ ಬಸ್ ಸುಸ್ಥಿರತೆಯನ್ನು ಹೆಚ್ಚಿಸಲು ಮತ್ತು ಮುಂಬರುವ ಪೀಳಿಗೆಗೆ ಹಸಿರು ಭವಿಷ್ಯಕ್ಕೆ ಕೊಡುಗೆ ನೀಡುವ ದೇಶದ ಪ್ರಯತ್ನಗಳಲ್ಲಿ ಒಂದಾಗಿದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್