ಸಂಜೆವೆರೆಗೂ ಕಾದು ನೋಡಿ ಮುಂದಿನ ತೀರ್ಮಾನ : ಸಿಪಿ ಯೋಗೇಶ್ವರ್
ಬೆಂಗಳೂರು, 22ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ ಎಂದಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದು ದೊಡ್ಡ ಗುಣ. ಆದರೆ, ಸದ್ಯ ನಾನಿನ್ನೂ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ಸಂಜೆವರೆಗೂ ಕಾದು ನೋಡುತ್ತೇನೆ. ನಂತರ ಬೆಂಬಲಿಗರ ಸಭೆ ನಡೆಸಿ ತೀರ್ಮಾನ ಪ್ರಕಟಿಸುತ್
ಸಂಜೆವೆರೆಗೂ ಕಾದು ನೋಡಿ ಮುಂದಿನ ತೀರ್ಮಾನ: ಸಿಪಿ ಯೋಗೇಶ್ವರ್


ಬೆಂಗಳೂರು, 22ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ ಎಂದಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದು ದೊಡ್ಡ ಗುಣ. ಆದರೆ, ಸದ್ಯ ನಾನಿನ್ನೂ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ಸಂಜೆವರೆಗೂ ಕಾದು ನೋಡುತ್ತೇನೆ. ನಂತರ ಬೆಂಬಲಿಗರ ಸಭೆ ನಡೆಸಿ ತೀರ್ಮಾನ ಪ್ರಕಟಿಸುತ್ತೇನೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ಇವತ್ತು ಚನ್ನಪಟ್ಟಣದಲ್ಲಿ ಕಾರ್ಯಕರ್ತರು, ಬೆಂಬಲಿಗರ ಸಭೆ ಕರೆದಿದ್ದೇನೆ. ಸಂಜೆವರೆಗೂ ಚರ್ಚೆ ಮಾಡಿ ಒಂದು ತೀರ್ಮಾನಕ್ಕೆ ಬರುತ್ತೇನೆ. ಇವತ್ತೆಲ್ಲ ಕಾಯುತ್ತೇನೆ, ಚನ್ನಪಟ್ಟಣಕ್ಕೆ ಹೋಗಿ ಬಂದ ಮೇಲೆ ಒಂದು ತೀರ್ಮಾನ ಮಾಡುತ್ತೇನೆ. ನಾನು ಕಾಂಗ್ರೆಸ್​ನ ಯಾರನ್ನೂ ಭೇಟಿ ಮಾಡಿಲ್ಲ. ಕಾರ್ಯಕರ್ತರ ಜತೆ ಚರ್ಚೆ ಬಳಿಕ ತೀರ್ಮಾನ ಮಾಡುತ್ತೇನೆ ಎಂದರು.

ಸಚಿವರ ಸಭೆಯಲ್ಲಿ ಯೋಗೇಶ್ವರ್ ಪಕ್ಷ ಸೇರ್ಪಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿರು ನಿಶಾನೆ ಕೊಟ್ಟಿದ್ದಾರೆ ಎನ್ನಲಾದ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಅದು ಸಿದ್ದರಾಮಯ್ಯ ಅವರ ದೊಡ್ಡ ಗುಣ. ಮುಖ್ಯಮಂತ್ರಿಗಳು ಹಾಗೆ ಮಾತನಾಡಿದ್ದಾರೆ ಎಂದರೆ ಸಂತೋಷ. ನಾನು ಹಿಂದೆ ಕಾಂಗ್ರೆಸ್​ನಲ್ಲೇ ಇದ್ದವನು. ಈಗ ಯಾವ ನಿರ್ಧಾರಕ್ಕೂ ಇನ್ನು ಬಂದಿಲ್ಲ. ಸಂಜೆ ನಂತರ ಮಾತನಾಡುತ್ತೇನೆ ಎಂದರು.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande