ಹುಬ್ಬಳ್ಳಿ: ಜೂಜು ಅಡ್ಡೆ ಮೇಲೆ ದಾಳಿ, ೧೯ಜನರ ಬಂಧನ
ಹುಬ್ಬಳ್ಳಿ, 30 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜೂಜುಕೋರರು ಹಾಗೂ ರೌಡಿಶೀಟರ್ ಗಳ ಮೇಲೆ ನಿಗಾವಹಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸುವ ವೇಳೆ ಜೂಜಾಟ ಆಡುತ್ತಿದ್ದ ರೌಡಿಗಳ ಗುಂಪು ಹುಬ್ಬಳ್ಳಿಯಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗ
Arrest


Arrest


ಹುಬ್ಬಳ್ಳಿ, 30 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜೂಜುಕೋರರು ಹಾಗೂ ರೌಡಿಶೀಟರ್ ಗಳ ಮೇಲೆ ನಿಗಾವಹಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸುವ ವೇಳೆ ಜೂಜಾಟ ಆಡುತ್ತಿದ್ದ ರೌಡಿಗಳ ಗುಂಪು ಹುಬ್ಬಳ್ಳಿಯಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕಳೆದ ರಾತ್ರಿ ಹುಬ್ಬಳ್ಳಿ ಶಹರ ಹಾಗೂ ಸಿಸಿಬಿ ಪೋಲಿಸರು ಜಂಟಿಯಾಗಿ ನಗರದ ಹೊರವಲಯದಲ್ಲಿ ಜೂಜಾಟ ಅಡ್ಡೆಯ ಮೇಲೆ ದಾಳಿ ನಡೆಸಿದ ವೇಳೆ ಘಟನೆ ನಡೆದಿದೆ. ಘಟನೆ ಕುರಿತು ಮಾಹಿತಿ ನೀಡಿರುವ ಹುಬ್ಬಳ್ಳಿ ಧಾರವಾಡ ಅವಳಿ ನಗರ ಪೋಲಿಸ್ ಆಯುಕ್ತ ಎನ್.ಶಶಿಕುಮಾರ್ ಖಚಿತ ಮಾಹಿತಿ ಮೇರೆಗೆ ತಮ್ಮ ಸಿಬ್ಬಂದಿ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ್ದು‌ ಈ ವೇಳೆ ಪೋಲಿಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ೧೯ ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ರೌಡಿ ಶೀಟರ್ ಮಂಜುನಾಥ್ ಅಲಿಯಾಸ್ ಸೈಂಟಿಸ್ಟ್ ಮಂಜ್ಯಾ ಬಂಡಾರಿ ಮತ್ತು ಜಿಲಾನಿ ಅಲಿಯಾಸ್ ಜೀಲು ದಾವಲ್ ಸಾಬ್ ನದಾಫ್ ಪರಾರಿಯಾಗಿದ್ದು, ಬಂಧನಕ್ಕೆ ಜಾಲ ಬೀಸಲಾಗಿದೆ.

ದಾಳಿ ವೇಳೆ ಬಂಧಿತರಿಂದ 17 ಮೊಬೈಲ್ ಮತ್ತು 61,530 ರೂಪಾಯಿ ನಗದು ವಶಕ್ಕೆ ಪಡೆಯಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande