ಕರ್ನಾಟಕದಲ್ಲಿ ಬಿಜೆಪಿಗೆ ಈಗಾಗಲೇ ಸಮರ್ಥನೆ ಸಿಕ್ಕಿದೆ: ಪ್ರಧಾನಿ ಮೋದಿ
ಶಿವಮೊಗ್ಗ, 18 ಮಾರ್ಚ್ (ಹಿ.ಸ): ಆ್ಯಂಕರ್ :- ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಪ್ರಧಾನಿ ನರೇಂದ್ರಮೋದಿ
Your Love, Support And Enthusiasm Indicates 


ಶಿವಮೊಗ್ಗ, 18 ಮಾರ್ಚ್ (ಹಿ.ಸ):

ಆ್ಯಂಕರ್ :- ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಪ್ರಧಾನಿ ನರೇಂದ್ರಮೋದಿ ಅವರು ಕರ್ನಾಟಕದಲ್ಲಿ ಮತ್ತೆ ರಣಕಹಳೆ ಮೊಳಗಿಸುವ ಮೂಲಕ ಚುನಾವಣಾ ಕಾವು ರಂಗೇರುವಂತೆ ಮಾಡಿದ್ದಾರೆ. ಎರಡು ದಿನಗಳ ಹಿಂದಷ್ಟೇ ಕಲ್ಯಾಣ ಕರ್ನಾಟಕದ ಮುಖ್ಯ ಕೇಂದ್ರ ಕಲಬರುಗಿಯಲ್ಲಿ ಬಿಜೆಪಿ ಪರ ಪ್ರಚಾರ ನಡೆಸಿದ್ದ ಮೋದಿಯವರು ಇಂದು ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಮಧ್ಯ ಕರ್ನಾಟಕದ ನಾಲ್ಕು ಜಿಲ್ಲೆಗಳ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿ ಬಿಜೆಪಿಯಲ್ಲಿ ಮಿಂಚಿನ ಸಂಚಲನ ಸೃಷ್ಟಿಸಿದರು.

ಶಿವಮೊಗ್ಗದ ಅಲ್ಲಮ್ಮಪ್ರಭು ಕ್ರೀಡಾಂಗಣದಲ್ಲಿ ದಾವಣಗೆರೆ, ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲಾ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದ ಮೋದಿ, ರಾಜ್ಯದಲ್ಲಿ ಈ ಬಾರಿ 28 ಕ್ಷೇತ್ರಗಳಲ್ಲೂ ಬಿಜೆಪಿ, ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳನ್ನು ಬೆಂಬಲ ನೀಡಬೇಕೆಂದು ಕೋರಿದರು.

ಎಂದಿನಂತೆ ಕನ್ನಡದಲ್ಲೇ ತಮ್ಮ ಭಾಷಣವನ್ನು ಆರಂಭಿಸಿದ ಮೋದಿಯವರು ತಮ್ಮ ಅರ್ಧಗಂಟೆಗಳ ಭಾಷಣದಲ್ಲಿ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟಗಳನ್ನು ತರಾಟೆಗೆ ತೆಗೆದುಕೊಂಡರು.

ಕರ್ನಾಟಕದಲ್ಲಿ ಇಲ್ಲಿನ ಜನತೆ ನನಗೆ ಒಂದು ಗ್ಯಾರಂಟಿಯನ್ನು ನೀಡಬೇಕು. ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳನ್ನು ಗೆಲ್ಲಿಸಿ ಕಾಂಗ್ರೆಸ್ಗೆ ಒಂದೇ ಒಂದು ಕ್ಷೇತ್ರವನ್ನು ಸಹ ಬಿಟ್ಟು ಕೊಡುವುದಿಲ್ಲ ಎಂದು ವಾಗ್ದಾನ ಮಾಡಬೇಕು. ಕರುನಾಡಿನಲ್ಲಿ ಎಲ್ಲಾ ಕಡೆ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಗೆಲ್ಲಬೇಕೆಂದು ಮನವಿ ಮಾಡಿಕೊಂಡರು.

ಕಾಂಗ್ರೆಸ್ ಕರ್ನಾಟಕವನ್ನು ಗ್ಯಾರಂಟಿ ನೆಪದಲ್ಲಿ ಲೂಟಿ ಹೊಡೆಯುತ್ತಿದೆ. ಇಲ್ಲಿನ ಹಣವು ದೆಹಲಿ ಪಾಲಾಗುತ್ತದೆ. ಅಲ್ಲಿನ ನಾಯಕರು ಕರುನಾಡನ್ನು ಎಟಿಎಂ ಮಾಡಿಕೊಂಡಿದ್ದಾರೆ. ಇದಕ್ಕೆ ಅವಕಾಶ ಮಾಡಿಕೊಡಬೇಡಿ. ಎನ್ಡಿಎ ಅಭ್ಯರ್ಥಿಗಳನ್ನು ಬಹುಮತದಿಂದ ಗೆಲ್ಲಿಸಿ ಎಂದು ಹೇಳಿದರು.

ಹತ್ತು ವರ್ಷಗಳಲ್ಲಿ ನಾವು ಒಂದೇ ಒಂದು ಹಗರಣವಿಲ್ಲದೆ ಸರ್ಕಾರವನ್ನು ಮುನ್ನಡೆಸಿದ್ದೇವೆ. ಕೇಂದ್ರದಲ್ಲಿ ಮೂರನೇ ಬಾರಿಗೆ ನಾವು ಅಕಾರಕ್ಕೆ ಬರುವುದು ನೂರಕ್ಕೆ ನೂರರಷ್ಟು ಖಚಿತ. ಗ್ಯಾರಂಟಿಗಳನ್ನು ನಂಬಿ ಕಾಂಗ್ರೆಸ್ಗೆ ಮರಳಾಗಬೇಡಿ. ವಿಶ್ವದಲ್ಲಿ ಭಾರತವನ್ನು ಮೊದಲ ಸ್ಥಾನಕ್ಕೆ ಕೊಂಡೊಯ್ಯಬೇಕಾದರೆ ಬಿಜೆಪಿಯನ್ನು ಗೆಲ್ಲಿಸಿ ಎಂದು ವಿನಮ್ರವಾಗಿ ಕೋರಿದರು.

ಹಿಂದೂಸ್ತಾನ್ ಸಮಾಚಾರ್


 rajesh pande