'ರಂಗಭೂಮಿಯ ಕಾಲಾತೀತ ಅಸ್ತಿತ್ವ'ರಾಷ್ಟ್ರೀಯ ವಿಚಾರ ಸಂಕಿರಣ
ಬಳ್ಳಾರಿ,, 27 ಮಾರ್ಚ್ (ಹಿ.ಸ): ಆ್ಯಂಕರ್: ಮನೋರಂಜನೆಗೆ ಹಲವಾರು ಮಾಧ್ಯಮಗಳಿದ್ದರೂ, ಸೃಜನಶೀಲತೆಯನ್ನು ಅರಳಿಸುವ ಪಾತ್
ರಾಷ್ಟ್ರೀಯ ವಿಚಾರ ಸಂಕಿರಣ


ರಾಷ್ಟ್ರೀಯ ವಿಚಾರ ಸಂಕಿರಣ


ರಾಷ್ಟ್ರೀಯ ವಿಚಾರ ಸಂಕಿರಣ


ರಾಷ್ಟ್ರೀಯ ವಿಚಾರ ಸಂಕಿರಣ


ಬಳ್ಳಾರಿ,, 27 ಮಾರ್ಚ್ (ಹಿ.ಸ):

ಆ್ಯಂಕರ್: ಮನೋರಂಜನೆಗೆ ಹಲವಾರು ಮಾಧ್ಯಮಗಳಿದ್ದರೂ, ಸೃಜನಶೀಲತೆಯನ್ನು ಅರಳಿಸುವ ಪಾತ್ರವನ್ನು ರಂಗಭೂಮಿ ಹಾಗೂ ರಂಗ ಕಲಾವಿದರು ಮಾಡುತ್ತಾರೆ ಎಂದು ಮೈಸೂರಿನ ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ನಾಗೇಶ ವಿ ಬೆಟ್ಟಕೋಟೆ ಅವರು ಹೇಳಿದ್ದಾರೆ.

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಪ್ರದರ್ಶನ ಕಲೆ ನಾಟಕ, ಕನ್ನಡ ಮತ್ತು ಇಂಗ್ಲೀಷ್ ಅಧ್ಯಯನ ವಿಭಾಗಗಳು ಜಂಟಿಯಾಗಿ ಬುಧವಾರ ಆಯೋಜಿಸಿದ್ದ ‘ರಂಗಭೂಮಿಯ ಕಾಲಾತೀತ ಅಸ್ತಿತ್ವ’ ಎಂಬ ವಿಷಯದ ಕುರಿತು ಒಂದು ದಿನದ ಅಂತರ್ ಶಿಸ್ತೀಯ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಂಗಭೂಮಿಯು ಹಲವಾರು ಕ್ಷೇತ್ರಗಳಲ್ಲಿ ಕ್ರಾಂತಿಗಳಿಗೆ ಎಡೆಮಾಡಿಕೊಟ್ಟಿದ್ದು, ರಂಗಭೂಮಿ ಇಂದಿಗೂ ಪ್ರಸ್ತುತವಾಗಿದೆ. ನಮ್ಮ ದೇಶದಲ್ಲಿ ರಂಗಭೂಮಿ ಅಗತ್ಯಕ್ಕೆ ಮಾತ್ರ ಸೀಮಿತವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ರಂಗಭೂಮಿಯ ಶಿಕ್ಷಣ ಉತ್ತಮವಾಗಿದ್ದರೆ ಕಲಾವಿದರು ಸಮಾಜಕ್ಕೆ ನೈತಿಕ ಶಿಕ್ಷಣ ನೀಡಲು ಸಹಕಾರಿಯಾಗುತ್ತದೆ. ಉತ್ತಮ ಪ್ರದರ್ಶನವು ಬೇರೆ ಬೇರೆ ಭಾಷೆಗಳಿಗೆ ತಾನಾಗೆಯೇ ಪ್ರದರ್ಶನಕ್ಕೆ ಅನುವು ಮಾಡಿಕೊಡುತ್ತದೆ. ಪ್ರದರ್ಶನ ಕಲೆಗಳೂ ವಿಶ್ವವಿದ್ಯಾಲಯದ ಅವಿಭಾಜ್ಯ ಅಂಗವಾಗಿಸುವ ನಿಟ್ಟಿನಲ್ಲಿ ಸರ್ಕಾರವು ಗಮನಹರಿಸಬೇಕು ಎಂದು ಹೇಳಿದರು.

ಮಹಾರಾಷ್ಟ್ರದ ಎಸ್ಪಿಪಿ ಮಹಾವಿದ್ಯಾಲಯ, ಸಿರ್ಸಲ, ಪಾರ್ಲಿ ವೈಜನಾಥ್ದ ಪ್ರದರ್ಶನ ಕಲೆ ನಾಟಕ ವಿಭಾಗದ ಮುಖ್ಯಸ್ಥರಾದ ಡಾ.ಚಂದ್ರಶೇಖರ್ ಕನಸೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ರಂಗಭೂಮಿಯೂ ಸಮಾಜದಲ್ಲಿ ಗಂಭೀರ ವಿಷಯಗಳತ್ತ ಬೆಳಕು ಚೆಲ್ಲುವ ಕೆಲಸ ಮಾಡುತ್ತಾ ಬಂದಿದೆ ಎಂದು ತಿಳಿಸಿದರು.

ಕಾರ್ಯಕ್ರಮ ಸಂಯೋಜಕರಾದ ಪ್ರೊ.ಶಾಂತನಾಯ್ಕ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ನಾಟಕ ವಿಭಾಗವು 2018ರಲ್ಲಿ ಆರಂಭವಾಗಿದ್ದು ಹಲವಾರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಿನೆಮಾ, ಧಾರವಾಹಿ, ರಂಗಭೂಮಿಗಳಲ್ಲಿ ಅವಕಾಶಗಳನ್ನು ನೀಡಿದೆ ಎಂದು ಹೇಳಿದರು.

ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಎಂ.ಮೇತ್ರಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಶ್ವದಾದ್ಯಂತ ಆಚರಿಸಲ್ಪಡುವ ದಿನಾಚರಣೆಗಳು ನಮ್ಮ ದೇಶದಲ್ಲಿವೆ. ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದೊಂದಿಗೆ ಒಡಂಬಡಿಕೆಯ ಮಾಡಿಕೊಂಡು ರಂಗಭೂಮಿ ಜೊತೆಗೆ ಸಂಗೀತ ಸಂಬಂಧಿತ ಕಾರ್ಯಕ್ರಮಗಳನ್ನು ನಡೆಸಬಹುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿವಿಯ ಕುಲಸಚಿವರಾದ (ಮೌಲ್ಯಮಾಪನ) ಪ್ರೊ.ರಮೇಶ್ ಓಲೇಕಾರ್ ಸೇರಿದಂತೆ ನಾಟಕ ವಿಭಾಗದ ಅತಿಥಿ ಉಪನ್ಯಾಸಕರುಗಳಾದ ಸಹನಾ ಪಿಂಜಾರ, ಹೇಮೇಶ್ವರ ಕೆ ಹಾಗೂ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ, ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


 rajesh pande