ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಸ್ಪರ್ಧಿಸಲು ರಾಹುಲ್ ಹಿಂದೇಟು ಹಾಕುತ್ತಿದ್ದಾರೆ: ಗುಲಾಂ ನಬಿ
ಶ್ರೀನಗರ್, 18 ಏಪ್ರಿಲ್ (ಹಿ.ಸ):ಆ್ಯಂಕರ್ :ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ನಾಯಕ
hulam Nabi Azad Alleges Rahul Gandhi 


ಶ್ರೀನಗರ್, 18 ಏಪ್ರಿಲ್ (ಹಿ.ಸ):ಆ್ಯಂಕರ್ :ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಿಂದೇಟು ಹಾಕುತ್ತಿದ್ದಾರೆ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಕ್ಷದ (ಡಿಪಿಎಪಿ) ಅಧ್ಯಕ್ಷ ಗುಲಾಂ ನಬಿ ಆಜಾದ್ ಹೇಳಿದ್ದಾರೆ. ಬಿಜೆಪಿ ವಿರುದ್ಧ ಕೆಚ್ಚೆದೆಯ ಹೋರಾಟ ನಡೆಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆಗಳನ್ನು ಆಜಾದ್ ತಳ್ಳಿ ಹಾಕಿದ್ದಾರೆ.

ರಾಹುಲ್ ಗಾಂಧಿ ಬಿಜೆಪಿ ಆಡಳಿತವಿರುವ ರಾಜ್ಯಗಳಿಂದ ಚುನಾವಣೆಗೆ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದರು. ಉಧಮ್ಪುರ ಲೋಕಸಭಾ ಕ್ಷೇತ್ರದ ಉಖ್ರಾಲ್ ಪ್ರದೇಶದ ಸಂಗಲ್ ದಾನ್ ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಆಜಾದ್, ರಾಹುಲ್ ಗಾಂಧಿ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಚುನಾವಣೆಗೆ ಸ್ಪರ್ಧಿಸಲು ಏಕೆ ಹಿಂದೆ ಸರಿಯುತ್ತಿದ್ದಾರೆ? ಬಿಜೆಪಿ ವಿರುದ್ಧ ಹೋರಾಡುತ್ತೇನೆ ಎಂದು ಗಾಂಧಿ ಹೇಳಿಕೊಳ್ಳುತ್ತಾರೆ, ಅವರ ನಡೆ ಬೇರೆಯದನ್ನು ಸೂಚಿಸುತ್ತವೆ. ಬಿಜೆಪಿ ಆಡಳಿತವಿರುವ ರಾಜ್ಯಗಳನ್ನು ಹೊರತುಪಡಿಸಿ ಅಲ್ಪಸಂಖ್ಯಾತ ಪ್ರಾಬಲ್ಯದ ರಾಜ್ಯಗಳಲ್ಲಿ ಏಕೆ ಆಶ್ರಯ ಪಡೆಯಬೇಕು ಎಂದು ಪ್ರಶ್ನಿಸಿದ್ದಾರೆ.

ತಮ್ಮ ಪಕ್ಷದ ಅಭ್ಯರ್ಥಿ ಜಿ.ಎಂ. ಸರೂರಿ ಅವರನ್ನು ಬೆಂಬಲಿಸಿ ಪ್ರಚಾರ ನಡೆಸುತ್ತಿರುವ ಆಜಾದ್, ಕಾಂಗ್ರೆಸ್ ನೇರ ಸವಾಲನ್ನು ಎದುರಿಸಲು ಹಿಂಜರಿಯುತ್ತಿದೆ ಮತ್ತು ಅಲ್ಪಸಂಖ್ಯಾತರ ಜನಸಂಖ್ಯೆಯು ಹೆಚ್ಚಿರುವ ಸುರಕ್ಷಿತ ಸ್ಥಾನಗಳನ್ನು ಹುಡುಕುವ ಪ್ರವೃತ್ತಿಯನ್ನು ಟೀಕಿಸಿದರು.

ಹಿಂದೂಸ್ತಾನ್ ಸಮಾಚಾರ್


 rajesh pande