ಬಳ್ಳಾರಿ, 19 ಏಪ್ರಿಲ್ (ಹಿ.ಸ):
ಆ್ಯಂಕರ್: ನಗರದ ಅಂಚೆ ನೌಕರರಿಂದ ಮತದಾನ ಜಾಗೃತಿ ಅಭಿಯಾನ ಅಂಗವಾಗಿ ಶುಕ್ರವಾರ ಕಾಲ್ನಡಿಗೆ ಜಾಥಾ ನಡೆಯಿತು.
ಅಂಚೆ ಅಧೀಕ್ಷಕ ವಿ.ಎಲ್.ಚಿತಕೋಟೆ ಅವರು ಕಾಲ್ನಡಿಗೆ ಜಾಥಾಗೆ ಚಾಲನೆ ನೀಡಿ, ಮತದಾನ ಪ್ರತಿ ಭಾರತೀಯನಿಗೆ ಸಿಕ್ಕ ಅಮೂಲ್ಯ ಹಕ್ಕು, ಪ್ರಜಾಪ್ರಭುತ್ವ ಬಲಪಡಿಸಲು ಅರ್ಹ ಅಭ್ಯರ್ಥಿಗಳಿಗೆ ನೀಡಬೇಕು ಎಂದು ಕರೆ ನೀಡಿದರು.
ಪ್ರತಿಯೊಬ್ಬ ಅರ್ಹ ಮತದಾರರು ಮೇ 07 ರಂದು ಲೋಕಸಭೆ ಚುನಾವಣೆಗೆ ತಪ್ಪದೇ ಮತದಾನ ಮಾಡಬೇಕು ಎಂದರು.
ಕಾಲ್ನಡಿಗೆ ಜಾಥಾವು ನಗರದ ಕನಕ ದುರ್ಗಮ್ಮ ದೇವಸ್ಥಾನದಿಂದ ಆರಂಭವಾಗಿ ತಾಳೂರು ರಸ್ತೆ, ಕಪ್ಪಗಲ್ ರಸ್ತೆ, ಗಾಂಧಿನಗರ ಮಾರ್ಕೆಟ್, ಮೋಕಾ ರಸ್ತೆ ಮಾರ್ಗವಾಗಿ ಸಂಚರಿಸಿ ಮತದಾನ ಜಾಗೃತಿ ಮೂಡಿಸಲಾಯಿತು.
ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ ಸೇರಿದಂತೆ ಅಂಚೆ ಇಲಾಖೆಯ ವಿವಿಧ ವಲಯಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.