ಮೈಸೂರು, 19 ಏಪ್ರಿಲ್ (ಹಿ.ಸ):ಆ್ಯಂಕರ್: ಪ್ರತಿಷ್ಠೆಯ ಚುನಾವಣಾ ಕಣವಾಗಿ ಪರಿಣಮಿಸಿರುವ ಮೈಸೂರು-ಕೊಡುಗು ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಸಂಘವು ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತ ಚಲಾಯಿಸಲು ತೆಗೆದುಕೊಂಡಿರುವ ತೀರ್ಮಾನಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಮೈಸೂರಿನ ಒಕ್ಕಲಿಗ ಸಂಘದ ಕೆಲವು ಬೆರಳೆಣಿಕೆಯ ಪ್ರಮುಖರು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಪರವಾಗಿ ಮತ ಚಲಾಯಿಸುತ್ತೇವೆ ಎಂದು ಹೇಳಿರುವುದು ಸಂಘದಲ್ಲೇ ಬಿರುಕು ಮೂಡಿಸಿದೆ.
ಯಾರನ್ನೂ ಕೇಳದೆ ಸಂಘದ ನಿರ್ದೇಶಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಕೇವಲ ಏಕಪಕ್ಷೀಯವಾಗಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಒಕ್ಕಲಿಗ ಸಮುದಾಯ ಮತ ಹಾಕಲಿದೆ ಎಂದು ಹೇಳಿರುವುದು ಸರಿಯಲ್ಲ. ಅಷ್ಟಕ್ಕೂ ಒಕ್ಕಲಿಗ ಸಮುದಾಯವನ್ನು ನಾವು ಯಾವುದೇ ರಾಜಕೀಯ ಪಕ್ಷಕ್ಕೆ ಗ್ರಾಂಟೆಡ್ ಫಾರ್ ಟೇಕನ್ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್