ನೇಹಾ ಕೊಲೆ ಪ್ರಕರಣ: ವೈಯಕ್ತಿಕ ಕಾರಣಕ್ಕೆ ಹತ್ಯೆ ಆಗಿದೆ; ಸಿದ್ದರಾಮಯ್ಯ
ಬೆಂಗಳೂರು, 19 ಏಪ್ರಿಲ್ (ಹಿ.ಸ):ಆ್ಯಂಕರ್:ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ
ಬೆಂಗಳೂರು, ೈೈ19 ಏಪ್ರಿಲ್ (ಹಿ.ಸ):ಆ್ಯಂಕರ್:


ಬೆಂಗಳೂರು, 19 ಏಪ್ರಿಲ್ (ಹಿ.ಸ):ಆ್ಯಂಕರ್:ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಮತ್ತು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಗಂಟೆಗೂ ಹೆಚ್ಚು ಕಾಲ ಸುದೀರ್ಘ ಸಭೆ ನಡೆಸಿದರು.

ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು. ಆರೋಪಿ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಿ. ಚುನಾವಣಾ ಸಮಯದಲ್ಲಿ ಇಂತಹ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದಾರಾಮಯ್ಯ, ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಬಹಳ ಚೆನ್ನಾಗಿದೆ. ಯಾವುದೇ ಕೊಲೆ ವೈಯಕ್ತಿಕ ಕಾರಣಕ್ಕೆ ಆಗಿರುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರ ಕೆಲಸ. ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುತ್ತೆ ಎಂದರು.

ಹಿಂದೂಸ್ತಾನ್ ಸಮಾಚಾರ್


 rajesh pande