ಡಿ.ಕೆ. ಸುರೇಶ್ ಪರ ಇಂದು ನಟ ದರ್ಶನ್ ಪ್ರಚಾರ
ಬೆಂಗಳೂರು, 20 ಏಪ್ರಿಲ್ (ಹಿ.ಸ):ಆ್ಯಂಕರ್:ಎರಡು ದಿನಗಳ ಹಿಂದೆಯಷ್ಟೇ ನಟ ದರ್ಶನ್ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ
oday-actor-darshan-is-campaigning-for-an


ಬೆಂಗಳೂರು, 20 ಏಪ್ರಿಲ್ (ಹಿ.ಸ):ಆ್ಯಂಕರ್:ಎರಡು ದಿನಗಳ ಹಿಂದೆಯಷ್ಟೇ ನಟ ದರ್ಶನ್ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮತಯಾಚನೆ ಮಾಡಿದ್ದರು. ಇದೀಗ ಮತ್ತೋರ್ವ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲು ದರ್ಶನ್ ಒಪ್ಪಿಕೊಂಡಿದ್ದಾರೆ. ಇಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರ ಪರವಾಗಿ ದರ್ಶನ್ ಬಹೃತ್ ರೋಡ್ ಶೋ ನಡೆಸಲಿದ್ದಾರೆ.

ರಾಜರಾಜೇಶ್ವರಿ ನಗರ ವಿಧಾನ ಸಭಾ ಕ್ಷೇತ್ರದ ಯಶವಂತರ ಪುರ ಮಾರ್ಕೆಟ್, ಲಗ್ಗೆರೆ ಸರ್ಕಲ್, ಕೊಟ್ಟಿಗೆ ಪಾಳ್ಯ ಮತ್ತು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಉತ್ತರಹಳ್ಳಿ, ವೀವರ್ಸ್ ಕಾಲೋನಿ, ಕೊಟ್ಟಿಗೆರೆ ವಾರ್ಡ್ ಗಳಲ್ಲಿ ಇಂದು ದರ್ಶನ್ ರೋಡ್ ಶೋನಲ್ಲಿ ಭಾಗಿಯಾಗಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande