ಅಬುದಾಭಿ, 21 ಏಪ್ರಿಲ್ (ಹಿ.ಸ):ಆ್ಯಂಕರ್: ಇತ್ತೀಚಿಗೆ ಯುಎಇಯ ಇತಿಹಾಸದಲ್ಲೇ ಅತೀ ಹೆಚ್ಚಿನ ಮಳೆ ಸುರಿದು ಸೃಷ್ಟಿಯಾದ ನೆರೆಯಿಂದ ಶಾರ್ಜಾ ಮತ್ತು ದುಬೈನ (ಹಲವು ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನಜೀವನ ಅಸ್ತವ್ಯಸ್ತವಾಗಿದ್ದು, ಜನರಿಗೆ ಊಟ, ನೀರು ಔಷಧಿಯ ಸಮಸ್ಯೆ ಎದುರಾಗಿರುವುದು ಮನಗಂಡು ಕನ್ನಡಿಗಾಸ್ ಹೆಲ್ಪ್ ಲೈನ್ ತಂಡ ನೆರವಿನ ಕಾರ್ಯಾಚರಣೆ ನಡೆಸಿದೆ.
ದುಬೈ ಇಂಡಿಯನ್ ಕಾನ್ಸುಲೇಟ್ ಅನುಮತಿ ಮತ್ತು ಸಹಯೋಗದಲ್ಲಿ ಕನ್ನಡಿಗಾಸ್ ಹೆಲ್ಪ್ ಲೈನ್ ತಂಡ ರಕ್ಷಣಾ ಬೋಟ್ ನಲ್ಲಿ ಊಟ, ನೀರು, ರೇಷನ್ ಗಳನ್ನು ಕಳೆದ ಮೂರು ದಿನಗಳಿಂದ ಸಂಕಷ್ಟದಲ್ಲಿರುವ ಅನಿವಾಸಿ ಭಾರತೀಯರಿಗೆ ಮಾತ್ರವಲ್ಲದೆ ನೂರಾರು ವಿದೇಶಿಯರಿಗೂ ಭೇದವಿಲ್ಲದೇ ನೆರವಿನ ಹಸ್ತನೀಡಿದೆ. ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಮುನ್ಸಿಪಾಲಿಟಿ ವಾಹನ ಚಾಲಕರಿಗೂ ಸ್ಥಳದಲ್ಲೇ ಊಟದ ವ್ಯವಸ್ಥೆ ಕಲ್ಪಿಸಿದೆ
ಹಿಂದೂಸ್ತಾನ್ ಸಮಾಚಾರ್