ನಿರ್ಭೀತಿಯಿಂದ ಮತ ಚಲಾಯಿಸಲು ಕೆಜಿಎಫ್ ಎಸ್.ಪಿ. ಶಾಂತರಾಜು ಕರೆ
ಕೋಲಾರ, ೨೪ ಏಪ್ರಿಲ್ (ಹಿ.ಸ) : ಆ್ಯಂಕರ್ : ಏ.೨೬ ರಂದು ಶುಕ್ರವಾರ ನಡೆಯುವ ಲೋಕಸಭಾ ಚುನಾವಣೆಯ ನಿಮಿತ್ತ ಕೆಜಿಎಫ್ ಪೊ
ಲೋಕಸಭಾ ಚುನಾವಣೆಗೆ ನಿಯೋಜನೆಯಾಗಿರುವ ಪೊಲೀಸ್ ಸಿಬ್ಬಂದಿಗೆ ಬಂಗಾರಪೇಟೆ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಕೆಜಿಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾ0ತರಾಜು ಅಗತ್ಯ ವಸ್ತುಗಳ ಕಿಟ್ ವಿತರಿಸಿದರು.


ಕೋಲಾರ, ೨೪ ಏಪ್ರಿಲ್ (ಹಿ.ಸ) :

ಆ್ಯಂಕರ್ : ಏ.೨೬ ರಂದು ಶುಕ್ರವಾರ ನಡೆಯುವ ಲೋಕಸಭಾ ಚುನಾವಣೆಯ ನಿಮಿತ್ತ ಕೆಜಿಎಫ್ ಪೊಲೀಸ್ ಜಿಲ್ಲೆಯಾದ್ಯಂತ ಮುಕ್ತ ಹಾಗೂ ನ್ಯಾಯಯುತ ಚುನಾವಣೆಗೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದ್ದು, ಮತದಾರರು ನಿರ್ಭಯದಿಂದ ಚಲಾಯಿಸುವಂತೆ ಕೆಜಿಎಫ್ ಪೊಲೀಸ್ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾ0ತರಾಜು ಕರೆ ನೀಡಿದರು.

ಲೋಕಸಭೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ, ಡಿ.ಎ.ಆರ್. ಸಿಪಿಎಂಎಫ್ ಹಾಗೂ ಕೆ.ಎಸ್.ಆರ್.ಪಿ ಅಧಿಕಾರಿ ಸಿಬ್ಬಂದಿಗಳಿಗೆ ಬಂಗಾರಪೇಟೆ ಜೂನಿಯರ್ ಕಾಲೇಜು ಮೈದಾನದಲ್ಲಿ ಮತ್ತು ಕೆ.ಜಿ.ಎಫ್ನ ಸ್ಕೂಲ್ ಆಫ್ ಮೈನ್ಸ್ನಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಲೋಕಸಭಾ ಚುನಾವಣೆ ಪ್ರಯುಕ್ತ ಚುನಾವಣಾ ಆಯೋಗದ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಆಯಾ ಠಾಣಾ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದು, ಯಾವುದೇ ಪೊಲೀಸ್ ಅಧಿಕಾರಿಗಳಾಗಲಿ, ಸಿಬ್ಬಂದಿಯಾಗಲೀ ಯಾವುದೇ ರಾಜಕೀಯ ಪಕ್ಷ ಮತ್ತು ಅಭ್ಯರ್ಥಿಗಳೊಂದಿಗೆ ಗುರುತಿಸಿಕೊಳ್ಳಬಾರದು ಹಾಗೊಮ್ಮೆ ಎಲ್ಲಾದರೂ ದೂರು ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾ0ತರಾಜು ಅವರು ಎಚ್ಚರಿಸಿದರು.

ಚುನಾವಣೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮವಿಡಲಾಗಿದೆ, ಸೂಕ್ತ ಆಯಾ ಠಾಣಾ ಗಡಿಗಳಲ್ಲಿ ಚೆಕ್ಪೋಸ್ಟ್ಗಳನ್ನು ನಿರ್ಮಿಸಿ ಒಳ ಪ್ರವೇಶಿಸುವ ಹಾಗೂ ಹೊರಹೋಗುವ ಎಲ್ಲಾ ವಾಹನಗಳನ್ನು ತಪಾಸಣೆಗೆ ಒಳಪಡಿಸಬೇಕು, ಅಕ್ರಮವಾಗಿ ಯಾವುದೇ ಬೆಲೆಬಾಳುವ ವಸ್ತುಗಳು, ಉಡುಗೊರೆಗಳು, ಹಣವನ್ನು ಕಂಡಲ್ಲಿ ಮುಟ್ಟುಗೋಲು ಹಾಕಿಕೊಂಡು ಕೂಡಲೇ ಪ್ರಕರಣ ದಾಖಲಿಸಬೇಕು, ಬಂದೂಕು, ಮಾರಣಾಯುಧಗಳನ್ನು ಯಾರೂ ಸಾರ್ವಜನಿಕ ಸ್ಥಳಗಳಲ್ಲಿ ಕೊಂಡೊಯ್ಯದ0ತೆ ಅಗತ್ಯ ಕ್ರಮವಿಡಬೇಕು, ಸಮಾಜಗಾತುಕ ಶಕ್ತಿಗಳು, ರೌಡಿ, ಗೂಂಡಾ ಪಟ್ಟಿಯಲ್ಲಿರುವವರ ಮೇಲೆ ತೀವ್ರ ನಿಗಾ ಇಡಬೇಕು, ಅಂತಹವರ ಚಲನ ವಲನಗಳ ಬಗ್ಗೆ ಸಾರ್ವಜನಿಕರ ಸಹಕಾರದಿಂದ ಮಾಹಿತಿ ಗೌಪ್ಯವಾಗಿ ಸಂಗ್ರಹಿಸಬೇಕೆ0ದರು.

ಕೋಲಾರ ಲೋಕಸಭಾ ಕ್ಷೇತ್ರದ ಕೆಜಿಎಫ್ ಹಾಗೂ ಬಂಗಾರಪೇಟೆ ವ್ಯಾಪ್ತಿಯಲ್ಲಿ ಏನಾದರೂ ಕಾನೂನು ಬಾಹಿರ ಪ್ರಕರಣಗಳು ಕಂಡು ಬಂದಲ್ಲಿ ಅಂತಹವರ ವಿರುದ್ದ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು, ಅಕ್ರಮ ಮದ್ಯ ಮಾರಾಟ ಹಾಗೂ ಹಂಚಿಕೆ ತಡೆಯುವಲ್ಲಿ ತಕ್ಷಣವೇ ಕಾರ್ಯಾಚರಣೆ ನಡೆಸಲಾಗುವುದು ತಪ್ಪಿದ್ದಲ್ಲಿ ಅಂತಹ ನಿರ್ಲಕ್ಷ್ಯ ಆರೋಪದ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಜರುಗಿಸುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾ0ತರಾಜು ಅವರು ಎಚ್ಚರಿಸಿದರು.

ಕೆಜಿಎಫ್ ಪೊಲೀಸ್ ಜಿಲ್ಲಾ ವ್ಯಾಪ್ತಿಯ ಅತೀ ಸೂಕ್ಷö್ಮ, ಸೂಕ್ಷö್ಮ, ಹಾಗೂ ಸಾಮಾನ್ಯ ಪ್ರದೇಶಗ0ಳಿಗೂ ಬಿಗಿ ಪೊಲೀಸ್ ಬಂದೋಬಸ್ತು ಒದಗಿಸಲಾಗಿದೆ. ೩೦ ಮೇಲುಸ್ತುವಾರಿ ಸ್ವಾ÷್ಕಡ್, ೮ ಚೆಕ್ಪೋಸ್ಟ್ಗಳು, ೨ ಎ.ಎಸ್.ಸಿ. ಟೀಮ್ಗಳು, ೨ ಕ್ಯೂ.ಆರ್.ಟಿ. ಟೀಮ್ಗಳು, ಜಿಲ್ಲೆಯಾದ್ಯಂತ ಗಸ್ತುಗಳನ್ನು ವ್ಯವಸ್ಥೆ ಮಾಡಲಾಗಿದೆಯೆಂದು ಎಸ್ಪಿ ಕೆ.ಎಂ.ಶಾ0ತರಾಜು ವಿವರಿಸಿದರು.

ಚುನಾವಣಾ ಬಂದೋಬಸ್ತಿಗಾಗಿ ಎಸ್ಪಿ-೧, ಇಬ್ಬರು ಡಿವೈಎಸ್ಪಿ, ಆರ್ಪಿಐ-೧, ಒಂಬತ್ತು ಇನ್ಸ್ಪೆಕ್ಟರ್, ೨೫ ಪಿಎಸ್ಐ, ೮೩ ಎಎಸ್ಐ, ೨೪೫ ಹೆಡ್ಕಾನ್ಸ್ಟೇಬಲ್, ೩೩೬ ಕಾನ್ಸ್ಟೇಬಲ್, ೮೧ ಮಹಿಳಾ ಕಾನ್ಸ್ಟೇಬಲ್, ೨೩೫ ಗೃಹರಕ್ಷಕರು, ೨೨೨ ಮಂದಿ ಡಿ.ಎ.ಆರ್. ಪೊಲೀಸರು, ೩ ಕೆಎಸ್ಆರ್ಪಿ ತುಕಡಿಗಳು ಸೇರಿದಂತೆ, ೯೩ ಮಂದಿ ಪ್ಯಾರಾ ಮಿಲಿಟರಿ (ರೈಲ್ವೆ ರಕ್ಷಣಾ ವಿಶೇಷ ಪಡೆ) ಸಿಬ್ಬಂದಿಯನ್ನು ಸೇರಿದಂತೆ ಎಲ್ಲಾ ಒಟ್ಟು ೧೫೦೦ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆಯೆಂದರು.

ಮತದಾರರು ಹಾಗೂ ಸಾರ್ವಜನಿಕರು ಲೋಕಸಭಾ ಚುನಾವಣೆಯಲ್ಲಿ ನಿರ್ಭೀತಿಯಿಂದ ಭಾಗವಹಿಸಬಹುದು. ಈ ಸಂಬ0ಧ ಯಾವುದೇ ಅಕ್ರಮ ಚಟುವಟಿಕೆ ಕುರಿತು ಮಾಹಿತಿ ಇದ್ದಲ್ಲಿ ಸಮೀಪದ ಪೊಲೀಸ್ ಠಾಣೆಗೆ, ನಿಸ್ತಂತು ಕೇಂದ್ರಕ್ಕೆ ದೂರವಾಣಿ ಸಂಖ್ಯೆ: ೧೧೨, ೦೮೧೫೩-೨೭೪೭೪೩, ೨೭೪೨೯೨ ಗಳಿಗೆ ಕರೆ ಮಾಡಿ ಮಾಹಿತಿ ತಿಳಿಸಲು ಎಸ್ಪಿ ಕೆ.ಎಂ.ಶಾ0ತರಾಜು ಕೋರಿದರು.

ಬಂಗಾರಪೇಟೆ ಹಾಗೂ ಕೆಜಿಎಫ್ ವಿಧಾನಸಭಾ ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆ ಪ್ರಯುಕ್ತ ಕೆಜಿಎಫ್ ಪೊಲೀಸ್ ಜಿಲ್ಲೆಯ ಸರಹದ್ದಿನಲ್ಲಿರುವ ಮತಗಟ್ಟೆಗಳ ಪೈಕಿ ಸೂಕ್ಷ್ಮ ಹಾಗೂ ಅತೀಸೂಕ್ಷ್ಮವೆಂದು ಗುರ್ತಿಸಿರುವ ಕಡೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು, ಒಟ್ಟಾರೇ ನ್ಯಾಯಸಮ್ಮತ ಹಾಗೂ ಮುಕ್ತ ರೀತಿಯಲ್ಲಿ ಚುನಾವಣೆ ನಡೆಯಲು ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಸಹಕರಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾ0ತರಾಜು ಅವರು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಎಲ್ಲಾ ಅಧಿಕಾರಿ ಸಿಬ್ಬಂದಿಗಳಿಗೆ ಮತಗಟ್ಟೆ, ಚುನಾವಣೆ ಕರ್ತವ್ಯದಲ್ಲಿ ಮೂಲಭೂತವಾಗಿ ಅವಶ್ಯಕವುಳ್ಳ ವಸ್ತುಗಳ ಕಿಟ್ಟನ್ನು ಹಾಗೂ ತಿಳುವಳಿಕೆ ಪುಸ್ತಕವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾ0ತರಾಜು ಅವರು ವಿತರಿಸಿದರು.

ಸಭೆಯಲ್ಲಿ ಪೊಲೀಸ್ ಉಪಾಧೀಕ್ಷಕರಾದ ಎಸ್.ಪಾಂಡುರ0ಗ, ತಿಪ್ಪೆಸ್ವಾಮಿ ಬಿ ಎಂ, ಸುರೇಂದ್ರ ಕುಮಾರ್ ಐ.ಪಿ.ಎಫ್ ಆರ್ಪಿಐ ರಾಮಕೃಷ್ಣ ಹಾಗೂ ಎಲ್ಲಾ ಸಿಪಿಐ, ಪಿ.ಎಸ್.ಐ.ಗಳು ಹಾಜರಿದ್ದರು.

ಚಿತ್ರ : ಲೋಕಸಭಾ ಚುನಾವಣೆಗೆ ನಿಯೋಜನೆಯಾಗಿರುವ ಪೊಲೀಸ್ ಸಿಬ್ಬಂದಿಗೆ ಬಂಗಾರಪೇಟೆ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಕೆಜಿಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾ0ತರಾಜು ಅಗತ್ಯ ವಸ್ತುಗಳ ಕಿಟ್ ವಿತರಿಸಿದರು.


 rajesh pande