ಕೋಲಾರ, ೨೪ ಏಪ್ರಿಲ್ (ಹಿ.ಸ) :
ಆ್ಯಂಕರ್ : ಕನ್ನಡದ ಹೊರ ನಟ ಡಾ.ರಾಜಕುಮಾರ ಅವರ ೯೬ನೇ ಜನ್ಮ ಜಯಂತಿಯನ್ನು ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯಿಂದ ಜಿಲ್ಲಾಧಿಕಾರಿಗಳ ಕಚೇರಿಯ ಎಂ.ಸಿ.ಎ0.ಸಿ ಕೊಠಡಿಯಲ್ಲಿ ಸರಳವಾಗಿ ಆಚರಿಸಲಾಯಿತು.
ಭಾವಚಿತ್ರಕ್ಕೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಅಕ್ರಂ ಪಾಷ ಪುಷ್ಪಾರ್ಚನೆ ಸಲ್ಲಿಸಿದರು. ಆ ನಂತರ ಸಿಬ್ಬಂದಿಯನ್ನುದ್ದೇಶಿಸಿ ಮಾತನಾಡಿದ ಅವರು ಏಪ್ರಿಲ್ ೨೬ ರಂದು ಕಡ್ಡಾಯವಾಗಿ ಮತದಾನ ಮಾಡಲು ಮನವಿ ಮಾಡಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಿಲ್ಲಾಧಿಕಾರಿ ಕಛೇರಿಯ ಎಂ.ಸಿ.ಎ0.ಸಿ ಕೊಠಡಿಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಡಾ.ರಾಜಕುಮಾರ ಅವರ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಶಂಕರ್ ವಣಿಕ್ಯಾಳ್, ಎಂ.ಸಿ.ಎ0.ಸಿ ಸಮಿತಿಯ ನೋಡಲ್ ಅಧಿಕಾರಿ ಬಿ.ವಿ ಚೇತನ್ ಕುಮಾರ್, ಮಾಧ್ಯಮ ನಿಗಾ ಕೋಶದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪಿ.ಕೌಸಲ್ಯ, ಮಂಜೇಶ, ಸುಧಾ, ಮಧುಪ್ರಸಾದ್, ಭಾರತಿ, ಎಂ. ಅಂಬರೀಶ್, ಕವಿತ, ನಂದೀಶ್. ಕೃಷಿ ಇಲಾಖೆಯ ಭವ್ಯರಾಣಿ, ಮಂಜುನಾಥ ಕೆ.ಎನ್. ಎಪಿಎಂಸಿ ವಿಜಯಲಕ್ಷ್ಮಿ, ಯಶಸ್ವಿನಿ, ಚೈತ್ರ, ಶೋಭ, ಡಾ. ರಾಜ್ಕುಮಾರ್ ಅಭಿಮಾನಗಳ ಸಂಘದ ಅಧ್ಯಕ್ಷ ಕೊ.ನಾ. ಪ್ರಭಾಕರ್, ಕೆ.ಸಿ.ಪಿ ನಾಗರಾಜ್ ಕೋಟೆ ಹಾಗೂ ಪದಾಧಿಕಾರಿಗಳು ಸೇರಿದಂತೆ ಅಧಿಕಾರಿ ಸಿಬ್ಬಂದಿ ಮತ್ತಿತರರು ಭಾಗವಹಿಸಿದ್ದರು.
ಚಿತ್ರ : ಕೋಲಾರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯ ಆಶ್ರಯದಲ್ಲಿ ಕನ್ನಡದ ವರನಟ ಡಾ.ರಾಜಕುಮಾರ ಅವರ ೯೬ನೇ ಜಯಂತಿಯನ್ನು ಆಚರಿಸಲಾಯಿತು.