ಕೋಲಾರ ಲೋಕಸಭಾ ಚುನಾವಣೆ, ಪೊಲೀಸರ ಪಥಸಂಚಲನ
ಕೋಲಾರ, ೨೪ ಏಪ್ರಿಲ್ (ಹಿ.ಸ) : ಆ್ಯಂಕರ್ : ಈ ತಿಂಗಳ ಶುಕ್ರವಾರ ನಡೆಯಲಿರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮುಕ
ಕೆಜಿಎಫ್ ಗರದ ರಾಬರ್ಟ್ಸನ್‌ಪೇಟೆ ಪೊಲೀಸ್ ಠಾಣೆಯ ಪಿ.ಎಸ್.ಐ ಯತೀಶ್ ರವರ ನೇತೃತ್ವದಲ್ಲಿ ಸಂಜಯ್‌ಗಾ0ಧಿ ನಗರ, ಅಂಬೇಡ್ಕರ್‌ನಗರ, ಇ.ಟಿ ಬ್ಲಾಕ್ ಪ್ರದೇಶಗಳಲ್ಲಿ ಪಥಸಂಚಲನ ನಡೆಸಿದರು.


ಕೋಲಾರ, ೨೪ ಏಪ್ರಿಲ್ (ಹಿ.ಸ) :

ಆ್ಯಂಕರ್ : ಈ ತಿಂಗಳ ಶುಕ್ರವಾರ ನಡೆಯಲಿರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮುಕ್ತ ಮತ್ತು ನ್ಯಾಯ ಸಮ್ಮತ ಮತದಾನ ನಡೆಯಲು ಹಾಗೂ ಮತದಾರರಲ್ಲಿ ಧೈರ್ಯ ತುಂಬಲು ಕೆಜಿಫ್ ಪೊಲೀಸರು ಹಾಗೂ ವಿಶೇಷ ರೈಲ್ವೆ ರಕ್ಷಣಾ ಪಡೆಯಿಂದ ಪಥ ಸಂಚಲನ ನಡೆಸಲಾಯಿತು.

ಏ.೨೬ ರಂದು ಕೋಲಾರ ಲೋಕಸಭಾ ಕ್ಷೇತ್ರದ ಚುನಾವಣೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಕ್ತ ಮತ್ತು ನ್ಯಾಯ ಸಮ್ಮತವಾಗಿ ಮತದಾನ ನಡೆಯಲು ಜನಜಾಗೃತಿ ಮತ್ತು ಮತದಾರರಲ್ಲಿ ಆತ್ಮವಿಶ್ವಾಸ ಮೂಡಿಸುವ ಸಲುವಾಗಿ ಬುಧವಾರ ಕೆ.ಜಿ.ಎಫ್ ಮತ್ತು ಬಂಗಾರಪೇಟೆ ವಿಧಾನ ಸಭಾ ಕ್ಷೇತ್ರದ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾದ ಅಧಿಕಾರಿ ಮತ್ತು ಪೊಲೀಸರಿಂದ ಎಲ್ಲಾ ಪೊಲೀಸ್ ಠಾಣೆಗಳ ಸರಹದ್ದಿನ ಸೂಕ್ಷ್ಮ ಪ್ರದೇಶಗಳಲ್ಲಿ ಪ್ರತ್ಯೇಕವಾಗಿ ರೈಲ್ವೆ ರಕ್ಷಣಾ ವಿಶೇಷ ಪಡೆಯವರ ಸಮೇತ ಪಥಸಂಚಲನ ನಡೆಸಿದರು.

ಚಿತ್ರ : ಕೆಜಿಎಫ್ ನಗರದ ರಾಬರ್ಟ್ಸನ್ಪೇಟೆ ಪೊಲೀಸ್ ಠಾಣೆಯ ಪಿ.ಎಸ್.ಐ ಯತೀಶ್ ರವರ ನೇತೃತ್ವದಲ್ಲಿ ಸಂಜಯ ಗಾಂಧಿ ನಗರ, ಅಂಬೇಡ್ಕರ್ ನಗರ, ಇ.ಟಿ ಬ್ಲಾಕ್ ಪ್ರದೇಶಗಳಲ್ಲಿ ಪಥಸಂಚಲನ ನಡೆಸಿದರು.


 rajesh pande