ನಾಳೆ ವಿಶ್ವ ಮಲೇರಿಯಾ ದಿನಾಚರಣೆ
ರಾಯಚೂರು, 24 ಏಪ್ರಿಲ್ (ಹಿ.ಸ): ಆ್ಯಂಕರ್ : ನಾಳೆ ವಿಶ್ವ ಮಲೇರಿಯಾ ದಿನಾಚರಣೆಯನ್ನು ನಗರದ ಜಿಲ್ಲಾ ಆರೋಗ್ಯ ಮತ್ತು ಕು
ನಾಳೆ ವಿಶ್ವ ಮಲೇರಿಯಾ ದಿನಾಚರಣೆ


ರಾಯಚೂರು, 24 ಏಪ್ರಿಲ್ (ಹಿ.ಸ):

ಆ್ಯಂಕರ್ : ನಾಳೆ ವಿಶ್ವ ಮಲೇರಿಯಾ ದಿನಾಚರಣೆಯನ್ನು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು ಅವರು ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ವಿಶ್ವ ಮಲೇರಿಯಾ ದಿನಾಚರಣೆಯನ್ನು ನಾಳೆ ಆಚರಿಸಲಾಗುವುದು. ಹೆಚ್ಚು ಸಮಾನತೆಯ ಜಗತ್ತಿಗೆ ಮಲೇರಿಯಾ ವಿರುದ್ದದ ಹೋರಾಟವನ್ನು ತೀವ್ರಗೊಳಿಸೋಣ ಎಂಬುವುದು ಈ ವರ್ಷದ ಧ್ಯೇಯ ವಾಕ್ಯವಾಗಿದೆ.

ಮಲೇರಿಯಾ ರೋಗದ ಲಕ್ಷಣಗಳು ಮತ್ತು ನಿಯಂತ್ರಣಾ ಕ್ರಮಗಳಾದ, ‘ಸೊಳ್ಳೆಗಳ ನಿಯಂತ್ರಣ ಒಂದೇ ಮಲೇರಿಯಾ ರೋಗದ ಹತೋಟಿಗೆ ಮುಖ್ಯ ವಿಧಾನ, ನೀರನ್ನು ಶೇಖರಿಸಿಡುವ ಸಿಮೆಂಟ್ ತೊಟ್ಟಿ, ಕಲ್ಲು ಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿ, ಡ್ರಮ್ ಬ್ಯಾರಲ್, ಎರ್ಕೂಲರ್, ಮಣ್ಣಿನ ಮಡಿಕೆಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ ತಿಕ್ಕಿ ತೊಳೆದು ಒಣಗಿಸಿ ಮತ್ತೆ ಭರ್ತಿ ಮಾಡಿಕೊಳ್ಳುವುದು ಮತ್ತು ಮುಚ್ಚಳದಿಂದ ಭದ್ರವಾಗಿ ಮುಚ್ಚಿಡುವುದು, ನೀರು ಸಂಗ್ರಹಣವಾಗದಂತೆ ಎಚ್ಚರ ವಹಿಸುವುದು, ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆಪರದೆ, ಸೊಳ್ಳೆ ನಿರೋಧಕಗಳನ್ನು ಬಳಸುವುದು, ಹಾಗೂ ಯಾವುದೇ ಜ್ವರವಿರಲಿ ಹತ್ತಿರದ ಸರ್ಕಾರಿ ಆರೊಗ್ಯ ಕೇಂದ್ರಕ್ಕೆ ಬೇಟಿ ನೀಡಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಿ “ರೋಗ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬಾರದಂತೆ ಮುಂಜಾಗ್ರತ ಕ್ರಮ ತೆಗೆದುಕೊಳ್ಳುವುದು ಅತ್ಯತ್ತಮ ಎಂದವರು ತಿಳಿಸಿದ್ದಾರೆ.


 rajesh pande