ಹುಬ್ಬಳ್ಳಿ, 24 ಏಪ್ರಿಲ್ (ಹಿ.ಸ):ಆ್ಯಂಕರ್:ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ ದಂಪತಿ ಇಂದು (ಏ.24) ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಭೇಟಿಯಾಗಿದ್ದಾರೆ. ಚುನಾವಣೆ ಮುಗಿದ ನಂತರ ಹರ್ಷಿಕಾ ದಂಪತಿ ಮೇಲಿನ ಹಲ್ಲೆಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಹರ್ಷಿಕಾ ತಿಳಿಸಿದ್ದಾರೆ.
ಪ್ರಹ್ಲಾದ್ ಜೋಶಿರನ್ನು ಭೇಟಿಯಾಗಿ ತಮ್ಮ ಮೇಲಿನ ಹಲ್ಲೆ ಬಗ್ಗೆ ವಿವರಿಸಿದ್ದಾರೆ. ದೌರ್ಜನ್ಯದ ವಿಚಾರ ತಿಳಿದ್ಮೇಲೆ ಸಚಿವ ಪ್ರಹ್ಲಾದ್ ಜೋಶಿ ಕಾನೂನು ಕ್ರಮ ಜರುಗಿಸೋದಾಗಿ ದಂಪತಿಗೆ ಭರವಸೆ ನೀಡಿದ್ದಾರೆ. ನಿಮ್ಮ ಜೊತೆ ನಾವಿದ್ದೇವೆ ಎಂದು ಧೈರ್ಯ ತುಂಬಿದ್ದಾರೆ. ಭೇಟಿಯ ಬಳಿಕ ಬಗ್ಗೆ ಹರ್ಷಿಕಾ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ನೇಹಾ ಹಿರೇಮಠ ಕುಟುಂಬಕ್ಕೆ ಸಾಂತ್ವನ ಹೇಳಲು ಹುಬ್ಬಳ್ಳಿಗೆ ಬಂದಿದ್ದೇವೆ ಎಂದು ಹರ್ಷಿಕಾ ಮಾತನಾಡಿದ್ದಾರೆ. ನಮಗೆ ಆದ ತೊಂದರೆಗೆ ಪ್ರಹ್ಲಾದ್ ಜೋಶಿಯವರು ಸ್ಪಂಧಿಸಿದ್ದರು. ಇಲ್ಲಿ ಬರುವ ಮುಂಚೆಯೇ ತಮ್ಮ ಮೇಲಿನ ಹಲ್ಲೆ ಬಗ್ಗೆ ಪ್ರಹ್ಲಾದ್ ಜೋಶಿಯವರು ಸೋಶಿಯಲ್ ಮೀಡಿಯಾದಲ್ಲಿ ಬೇಸರ ವ್ಯಕ್ತಪಡಿಸಿದ್ದರು. ಇದೀಗ ಅವರಿಗೆ ಧನ್ಯವಾದ ತಿಳಿಸಲು ಮನೆಗೆ ಬಂದಿದ್ದೇವೆ ಎಂದು ನಟಿ ಮಾತನಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್