ಹೈದರಾಬಾದ್ , 25 ಏಪ್ರಿಲ್ (ಹಿ.ಸ):ಕಾರು ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದಿಂದ ಸುಮಾರು 180 ಕಿಮೀ ದೂರದಲ್ಲಿರುವ ಕೊಡದ ಪಟ್ಟಣದ ಬಳಿ ಈ ಘಟನೆ ಸಂಭವಿಸಿದ್ದು, ಹತ್ತು ವ್ಯಕ್ತಿಗಳೊಂದಿಗೆ ಹತ್ತಿದ ಕಾರು ಹೈದರಾಬಾದ್-ವಿಜಯವಾಡ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರು ಅತಿವೇಗದಲ್ಲಿ ಟ್ರಕ್ಗೆ ಡಿಕ್ಕಿ ಹೊಡೆದಿದ್ದರಿಂದ ಎಲ್ಲಾ ಆರು ಪ್ರಯಾಣಿಕರು (ನಾಲ್ಕು ಪುರುಷರು, ಒಬ್ಬ ಮಹಿಳೆ ಮತ್ತು ಹೆಣ್ಣು ಮಗು) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೈದರಾಬಾದ್ನಿಂದ ವಿಜಯವಾಡಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಹಿಂದೂಸ್ತಾನ್ ಸಮಾಚಾರ್