ನೇಹಾ ಹಿರೇಮಠ್ ನಿವಾಸಕ್ಕೆ ಇಂದು ಸಿದ್ದರಾಮಯ್ಯ ಭೇಟಿ
ಬೆಂಗಳೂರು, 25 ಏಪ್ರಿಲ್ (ಹಿ.ಸ):ಆ್ಯಂಕರ್:ಹುಬ್ಬಳ್ಳಿಯ ಕಾಲೇಜು ಕ್ಯಾಂಪಸ್ನಲ್ಲಿ ನಡೆದಿದ್ದ ನೇಹಾ ಹಿರೇಮಠ್ ಹತ್ಯೆ ಪ್
m-siddaramaiah-today-visit-to-neha-hiremath-house/


ಬೆಂಗಳೂರು, 25 ಏಪ್ರಿಲ್ (ಹಿ.ಸ):ಆ್ಯಂಕರ್:ಹುಬ್ಬಳ್ಳಿಯ ಕಾಲೇಜು ಕ್ಯಾಂಪಸ್ನಲ್ಲಿ ನಡೆದಿದ್ದ ನೇಹಾ ಹಿರೇಮಠ್ ಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಆಕ್ರೋಶದ ಜ್ವಾಲೆಯನ್ನ ಎಬ್ಬಿಸಿದೆ. ಮಗಳ ಅಗಲಿಕೆಯ ನೋವಿನಲ್ಲಿರುವ ನೇಹಾ ಕುಟುಂಬವನ್ನ ನಟಿ ಹರ್ಷಿಕಾ ಪೂಣಚ್ಚ ದಂಪತಿ ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ನೇಹಾ ಮನೆಗೆ ಭೇಟಿ ನೀಡಲಿದ್ದಾರೆ.

ನೇಹಾ ಕುಟುಂಬಕ್ಕೆ ಸಾಂತ್ವನ ಹೇಳಲಿರುವ ಸಿಎಂ

ಹುಬ್ಬಳ್ಳಿಯ ನೇಹಾ ಹಿರೇಮಠ್ ಕೊಲೆ ಪ್ರಕರಣ ರಾಜಕೀಯ ಕಿತ್ತಾಟಕ್ಕೆ ವೇದಿಕೆ ಆಗಿತ್ತು. ಬಿಜೆಪಿಯ ಘಟಾನುಘಟಿ ನಾಯಕರು, ನಿರಂಜನ್ ಹಿರೇಮಠ್ ಮನೆಗೆ ತೆರಳಿ, ಸಾಂತ್ವನ ಹೇಳಿದ್ದರು. ತಮ್ಮ ಪಕ್ಷದ ಕಾರ್ಪೊರೇಟರ್ ಪುತ್ರಿಯೇ ಅನ್ಯಕೋಮಿನ ಯುವಕನಿಂದ ಬಲಿಯಾಗಿದ್ರೂ ಮುಖ್ಯಮಂತ್ರಿ, ಆಗಲಿ ಮುಖ್ಯಮಂತ್ರಿ ಆಗಲಿ ಸಾಂತ್ವನ ಹೇಳಲು ಮುಂದಾಗಿರಲಿಲ್ಲ. ಇದು ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಖುದ್ದು ನಿರಂಜನ್ ಹಿರೇಮಠ್ ಅವರೇ ಬೇಸರ ಹೊರಹಾಕಿದ್ರು. ಇದರ ಬೆನ್ನಲ್ಲೇ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಫೋನ್ ಕರೆ ಮಾಡಿ, ಸಾಂತ್ವನ ಹೇಳಿದ್ದರು. ಇವತ್ತು ನೇಹಾ ಹಿರೇಮಠ್ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande