ನವದೆಹಲಿ, 28 ಏಪ್ರಿಲ್ (ಹಿ.ಸ): ಆ್ಯಂಕರ್:ಲೋಕಸಭಾ ಚುನಾವಣೆ ಯ ಹೊಸ್ತಿಲಲ್ಲೇ 1,500 ಮಂದಿ ಸಿಖ್ಖರು ಬಿಜೆಪಿ ) ಗೆ ಸೇರ್ಪಡೆಗೊಂಡಿರುವುದು ಬಿಜೆಪಿಗೆ ಭಾರಿ ಬಲ ಬಂದಂತಾಗಿದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್, ಪಕ್ಷದ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಮತ್ತು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್ ದೇವ ಅವರ ಸಮ್ಮುಖದಲ್ಲಿ ಸಿಖ್ ಸಮುದಾಯದ ಜನರು ಪಕ್ಷಕ್ಕೆ ಸೇರ್ಪಡೆಗೊಂಡರು.
ದೇಶದಲ್ಲಿ 2024ರ ಲೋಕಸಭೆ ಚುನಾವಣೆಗೆ ಮತದಾನ ನಡೆಯುತ್ತಿರುವ ಹೊತ್ತಿನಲ್ಲೇ ಇವರು ಬಿಜೆಪಿಯೊಂದಿಗೆ ಕೈ ಜೋಡಿಸಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡ ಮಾತನಾಡಿ, ನಮ್ಮ ಸಿಖ್ ಸಹೋದರರು ದೇಶಕ್ಕಾಗಿ ಹೇಗೆ ಪ್ರಾಣ ತ್ಯಾಗ ಮಾಡಿದರು ಎಂಬುದು ನಮಗೆ ಗೊತ್ತಿದೆ. ದೇಶದ ಮೇಲೆ ನಡೆದ ಎಲ್ಲಾ ದಾಳಿಗಳಿಗೆ ತಕ್ಕ ಉತ್ತರ ನೀಡಿದ್ದ ಸಿಖ್ ಸಹೋದರರು ಅಪಾರ ಕೊಡುಗೆ ನೀಡಿದ್ದಾರೆ.
ಇಂತಹ ಸಿಖ್ ಸಮುದಾಯದವರು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದು ನಮಗೆ ಹೆಮ್ಮೆ ಮತ್ತು ಸಂತೋಷದ ಸಂಗತಿಯಾಗಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್