ಲಕ್ನೋ, 28 ಏಪ್ರಿಲ್ (ಹಿ.ಸ): ಆ್ಯಂಕರ್:ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರಿಗೆ ಗೋಮಾಂಸ ತಿನ್ನುವ ಹಕ್ಕನ್ನು ನೀಡುತ್ತದೆ ಇದು ಗೋಹತ್ಯೆಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಯೋಗಿ, ಹಿಂದೂ ಧರ್ಮದಲ್ಲಿ ಗೋವನ್ನು ತಾಯಿಯಂತೆ ಪೂಜಿಸಲಾಗುತ್ತದೆ. ನಾಚಿಕೆ ಇಲ್ಲದ ಜನರು ಗೋಮಾಂಸ ತಿನ್ನುವ ಹಕ್ಕಿನ ಭರವಸೆ ನೀಡುತ್ತಾರೆ, ಭಾರತ ಇದಕ್ಕೆ ಎಂದಾದರೂ ಒಪ್ಪಿಕೊಳ್ಳುತ್ತದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.
ಅಲ್ಪಸಂಖ್ಯಾತರಿಗೆ ಅವರವರ ಇಷ್ಟದ ಆಹಾರ ತಿನ್ನುವ ಸ್ವಾತಂತ್ರ್ಯ ಕೊಡಬೇಕು ಎಂದರೆ ಗೋಹತ್ಯೆಗೆ ಅವಕಾಶ ಕೊಡುವ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ದೇಶದಲ್ಲಿ ಹಿಂದೂ ಸಮುದಾಯವು ಗೋಮಾಂಸವನ್ನು ಸಂಪೂರ್ಣವಾಗಿ ತ್ಯಜಿಸುತ್ತದೆ, ಏಕೆಂದರೆ ಅವರು ಗೋವನ್ನು ಪವಿತ್ರವೆಂದು ಪರಿಗಣಿಸುತ್ತಾರೆ. ಈ ನಿಟ್ಟಿನಲ್ಲಿ ಮುಸ್ಲಿಮರಿಗೆ ವಿನಾಯಿತಿ ನೀಡುವ ಕಾಂಗ್ರೆಸ್ನ ಪ್ರಯತ್ನವು ಎಲ್ಲರಿಗೂ ಸ್ವೀಕಾರಾರ್ಹವಲ್ಲ ಎಂದು ಅವರು ಹೇಳಿದರು.
ಉತ್ತರ ಪ್ರದೇಶ ಈಗಾಗಲೇ ಗೋಹತ್ಯೆ ವಿರುದ್ಧ ಕಠಿಣ ಕಾನೂನುಗಳನ್ನು ಹೊಂದಿದ್ದು, 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 5 ಲಕ್ಷ ರೂ. ದವರೆಗೆ ದಂಡ ವಿಧಿಸುವ ಅವಕಾಶವನ್ನು ಹೊಂದಿದೆ. ಉತ್ತರ ಪ್ರದೇಶ ಸರ್ಕಾರವು 2020 ರಲ್ಲಿ ಗೋಹತ್ಯೆ ಕುರಿತು ಸುಗ್ರೀವಾಜ್ಞೆಯನ್ನು ಜಾರಿಗೊಳಿಸುವ ಮೂಲಕ ಕಾನೂನಾಗಿ ರೂಪಿಸಿತು.
2020 ರಲ್ಲಿ, ಯೋಗಿ ಸರ್ಕಾರವು ಸುಗ್ರೀವಾಜ್ಞೆಯನ್ನು ಪ್ರಕಟಿಸಿತು ಮತ್ತು ನಂತರ ಅದನ್ನು ರಾಜ್ಯದಲ್ಲಿ ಜಾರಿಗೆ ತರಲು ಕಾನೂನನ್ನು ಜಾರಿಗೊಳಿಸಿತು. ಯುಪಿಎ ಸರ್ಕಾರದ ಅವಧಿಯಲ್ಲಿ 2004ರಿಂದ 2014ರವರೆಗೆ ಕಾಂಗ್ರೆಸ್ ಇಂತಹ ಪ್ರಯತ್ನಗಳನ್ನು ಮಾಡಿದೆ. ಕರ್ನಾಟಕದಲ್ಲಿ ಎಸ್ಸಿ, ಎಸ್ಟಿ ಮತ್ತು ಒಬಿಸಿ ಮೀಸಲಾತಿಯಲ್ಲಿ ಮುಸ್ಲಿಮರಿಗೆ ಕೋಟಾ ನೀಡಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್