ದೇಶವಿರೋಧಿ ಪಿ ಎಫ್ ಐ ಸಂಘಟನೆ ಕಾಂಗ್ರೆಸ್ ಗೆ ಬೆಂಬಲ ನೀಡಿದೆ: ಮೋದಿ
ಬೆಳಗಾವಿ, 28 ಏಪ್ರಿಲ್ (ಹಿ.ಸ): ಆ್ಯಂಕರ್: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಬೆಳಗಾವಿಯಲ್ಲಿ ಮಹಿಳೆಯನ
ವ್


ಬೆಳಗಾವಿ, 28 ಏಪ್ರಿಲ್ (ಹಿ.ಸ): ಆ್ಯಂಕರ್:

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಅಪಮಾನ ಮಾಡಲಾಯಿತು. ಚಿಕ್ಕೋಡಿಯಲ್ಲಿ ಜೈನ ಮುನಿಯ ಹತ್ಯೆಯಾಯಿತು. ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಕೊಲೆಯಾಯಿತು. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಗೊಂಡಿತು. ಈ ಸ್ಫೋಟವನ್ನು ಕಾಂಗ್ರೆಸ್ ಸಿಲೆಂಡರ್ ಬ್ಲಾಸ್ಟ್ ಎಂದಿತು. ಕಾಂಗ್ರೆಸ್ ಮತಕ್ಕಾಗಿ ತುಷ್ಟೀಕರಣ ರಾಜಕೀಯ ಮಾಡುತ್ತಿದೆ. ಇದರಿಂದ ಕಾಂಗ್ರೆಸ್ ಮುಂದಿನ ದಿನಗಳಲ್ಲಿ ಬರಬಾದ್ ಆಗಲಿದೆ. ದೇಶವಿರೋಧಿ ಪಿ ಎಫ್ ಐ ಸಂಘಟನೆ ಕಾಂಗ್ರೆಸ್ಗೆ ಬೆಂಬಲ ನೀಡಿದೆ ಎಂದು ಕಿಡಿಕಾರಿದರು.

ಬೆಳಗಾವಿಯ ಮಾಲಿನಿ ಸಿಟಿ ಮೈದಾನದಲ್ಲಿ ನಡೆಯುತ್ತಿರು ಬಿಜೆಪಿ ಸಮಾವೇಶದಲ್ಲಿ ಮೋದಿ ಮಾತನಾಡಿದರು.

ಕಾಂಗ್ರೆಸ್ನಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ: ಮೋದಿ

ಕಾಂಗ್ರೆಸ್ ಸುಳ್ಳು ಹೇಳುತ್ತಾ, ಜನರ ವಿಶ್ವಾಸವನ್ನು ಕಳೆದುಕೊಂಡಿದೆ. ಕಾಂಗ್ರೆಸ್ ಮಹತ್ವದ ವಿಚಾರಗಳ ಬಗ್ಗೆ ಸುಳ್ಳು ಹೇಳುತ್ತಾ, ದೇಶದ ಲೋಕತಂತ್ರವನ್ನು ಹಾಳು ಮಾಡುತ್ತಿದೆ ಎಂದು ಜನರು ಹೇಳುತ್ತಿದ್ದಾರೆ. ಕಾಂಗ್ರೆಸಿಗರು ಮಾನಸಿಕವಾಗಿ ಆಂಗ್ಲರ ಗುಲಾಮಿತನ ಭಾವದಿಂದ ಜೀವಿಸುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ವಾಗ್ದಾಳಿ ಮಾಡಿದರು.

ಹಿಂದೂಸ್ತಾನ್ ಸಮಾಚಾರ್


 rajesh pande