ಜಗತ್ ಸಿಂಗ್ ಪುರ, 30 ಏಪ್ರಿಲ್ (ಹಿ.ಸ):ಆ್ಯಂಕರ್:ಸೇತುವೆಯಿಂದ ಬಸ್ ಪಲ್ಟಿಯಾಗಿ 20 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಒಡಿಶಾದ ಜಗತ್ ಸಿಂಗ್ ಪುರದಲ್ಲಿ ನಡೆದಿದೆ. ಬಸ್ 10 ಮಹಿಳೆಯರು ಮತ್ತು 7 ಮಕ್ಕಳು ಸೇರಿದಂತೆ 35 ಕ್ಕೂ ಹೆಚ್ಚು ಜನರನ್ನು ಹೊತ್ತು ಸಾಗಿಸುತ್ತಿತ್ತು. ಈ ವೇಳೆ ದುರ್ಘಟನೆ ಸಂಭವಿಸಿದೆ.
ಬಸ್ ಧನುರಬೆಳರಿಯಲ್ಲಿ ಮದುವೆ ಕಾರ್ಯಕ್ರಮದಿಂದ ಬಲಿಕುಡದ ಬೂದಿಸಾಹಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಕೂಡಲೇ ಗಾಯಾಳುಗಳನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತನಿಖೆ ಆರಂಭಿಸಿದ್ದಾರೆ. ಸದ್ಯ ಗಾಯಾಳುಗಳು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್