ಬರದಲ್ಲೂ ಕೃಷಿ ವಿಶ್ವವಿದ್ಯಾನಿಲಯ 30 ಬೋರ್ವೆಲ್ನಲ್ಲಿ ನೀರು!
ಬೆಂಗಳೂರು, 30 ಏಪ್ರಿಲ್ (ಹಿ.ಸ):ಆ್ಯಂಕರ್:ಬೆಂಗಳೂರು ನಗರದ ಹಲವೆಡೆ ಬೇಸಿಗೆಯಲ್ಲಿ ನೀರಿಗೆ ಹಾಹಾಕಾರ ಉಂಟಾದರೂ ಬೆಂಗಳ
n-drought-there-is-water-in-30-borewells-of-bengalur


ಬೆಂಗಳೂರು, 30 ಏಪ್ರಿಲ್ (ಹಿ.ಸ):ಆ್ಯಂಕರ್:ಬೆಂಗಳೂರು ನಗರದ ಹಲವೆಡೆ ಬೇಸಿಗೆಯಲ್ಲಿ ನೀರಿಗೆ ಹಾಹಾಕಾರ ಉಂಟಾದರೂ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಮಾತ್ರ ಇದಕ್ಕೆ ಅಪವಾದ. ಏಕೆಂದರೆ ವೈಜ್ಞಾನಿಕವಾಗಿ ಹಲವು ರೀತಿಯಲ್ಲಿ ಮಳೆ ನೀರು ಕೊಯ್ಲು ಅನುಸರಿಸಿದ್ದೇ ಇದಕ್ಕೆ ಕಾರಣ. ವಿವಿಯ ಮಳೆ ನೀರು ಕೊಯ್ಲು ವಿಧಾನದಿಂದ ಶೇಖರಣೆಯಾದ ನೀರನ್ನು ಕಚೇರಿ ಮತ್ತು ಸಂಶೋಧನಾ ತಾಕುಗಳಿಗೆ ಉಪಯೋಗಿಸಲಾಗುತ್ತಿದೆ. ಜಿಕೆವಿಕೆ ಕ್ಯಾಂಪಸ್ ನಲ್ಲಿ ಸುಮಾರು 30 ಕೊಳವೆ ಬಾವಿಗಳಿದ್ದು, ಜಲ ಮರು ಪೂರಣದಿಂದಾಗಿ ಬರಗಾಲದಲ್ಲೂ ಯಾವುದೇ ಕೊಳವೆಬಾವಿ ವಿಫಲವಾಗಿಲ್ಲ ಎಂಬುದು ವಿಶೇಷವಾಗಿದೆ.

ಚಾವಣಿ ಮೇಲೆ ಬಿದ್ದ ಮಳೆಯ ನೀರನ್ನು ಪೈಪಿನ ಮೂಲಕ ಸಂಗ್ರಹಿಸಿ ಧೂಳು, ಕಸ, ಕಡ್ಡಿಗಳನ್ನು ಶೋಧಿಸಲಾಗಿದೆ. ಇದರಿಂದಾಗಿ ಆ್ಯಸಿಡ್ ಮಳೆ ನೀರು ನ್ಯೂಟ್ರಲ್ ನೀರಾಗಿ ಪರಿವರ್ತನೆಗೊಂಡು ಮನೆ ಅಥವಾ ಕಚೇರಿ ಬಳಕೆಗೆ ಯೋಗ್ಯವಾಗುತ್ತದೆ. ಈ ರೀತಿ ಶೋಧಿಸಿದ ನೀರನ್ನು ಪೈಪ್ ಮೂಲಕ ಇಂಗು ಗುಂಡಿಗೂ ತಲುಪಿಸಲಾಗಿದೆ. ನೀರು ಇಂಗಿ ಉಳಿದದ್ದು ಕೊಳವೆ ಬಾವಿ ಮೂಲಕ ಅಂತರ್ಜಲ ಸೇರಿದೆ. ಫಿಲ್ಟರ್ ಘಟಕಗಳ ಮೂಲಕವೂ ಕೊಳವೆ ಬಾವಿ ಜಲ ಮರು ಪೂರಣ ಮಾಡಲಾಗಿದೆ.

‘ಬೆಂಗಳೂರಿನ ಶೇ.78ರಷ್ಟು ಭೂಭಾಗ ಕಟ್ಟಡ, ರಸ್ತೆ, ಕಾಲುದಾರಿಗಳಿಂದ ಆವರಿಸಲ್ಪಟ್ಟಿದೆ. ಉಳಿದ ಭಾಗ ಮಣ್ಣಿನಿಂದ ಕೂಡಿದೆ. ಮಳೆ ನೀರಿನ ಶೇ.70 ರಿಂದ 75 ರಷ್ಟು ಪ್ರಮಾಣ ಒಳ ಚರಂಡಿ ಸೇರಿದರೆ, ಶೇ.15 ರಿಂದ 20 ಭೂಮಿಯಲ್ಲಿ ಇಂಗುತ್ತದೆ. ಉಳಿದ 5 ರಿಂದ 10 ಭಾಗ ಆವಿಯಾಗುತ್ತದೆ. 30/40 ಅಡಿ ಮನೆಯ ಚಾವಣಿಯಲ್ಲಿ ಮಳೆ ನೀರು ಕೊಯ್ಲು ಮಾಡಿದರೆ 4 ಜನರಿರುವ ಕುಟುಂಬಕ್ಕೆ 6 ತಿಂಗಳಿಗಾಗುವಷ್ಟು ನೀರು ಸಿಗುತ್ತದೆ. ಮಳೆ ನೀರನ್ನು ಸಮರ್ಥವಾಗಿ ಬಳಸಿದರೆ ಬೃಹತ್ ಬೆಂಗಳೂರನ್ನು ಕಾಡುವ ನೀರಿನ ಸಮಸ್ಯೆಯನ್ನು ಹೊಡೆದೊಡಿಸಬಹುದು’ ಎಂದು ವಿವಿಯ ಮಣ್ಣು ಮತ್ತು ನೀರು ಸಂರಕ್ಷಣಾ ಅಭಿಯಂತರ ಡಾ। ಕೆ.ದೇವರಾಜ ಅಭಿಪ್ರಾಯಪಟ್ಟಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande