ಕುರುಗೋಡು, 02 ಮೇ (ಹಿ.ಸ):
ಆ್ಯಂಕರ್ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಳ್ಳಾರಿ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕುರುಗೋಡು ಪಟ್ಟಣಕ್ಕೆ ಭೇಟಿ ನೀಡಿ, ಐತಿಹಾಸಿಕ ಪ್ರಸಿದ್ಧ ದೊಡ್ಡಬಸವೇಶ್ವರ ದೇವಸ್ಥಾನದಲ್ಲಿ ಗುರುವಾರ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ. ಶ್ರೀರಾಮುಲು, ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಇನ್ನಿತರರು ಉಪಸ್ಥಿತರಿದ್ದರು.