ಕೋಲ್ಕತ್ತಾ, 2 ಮೇ (ಹಿ.ಸ):ಆ್ಯಂಕರ್:ತೃಣಮೂಲ ಕಾಂಗ್ರೆಸ್(ಟಿಎಂಸಿ)ನ ಪಶ್ಚಿಮ ಬಂಗಾಳ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಪದಚ್ಯುತಗೊಳಿಸಿದ ಬಳಿಕ ಕುಣಾಲ್ ಘೋಷ್ ಅವರು 2021ರ ವಿಧಾನಸಭಾ ಚುನಾವಣೆಗೂ ಮುನ್ನವೇ ಟಿಎಂಸಿಗೆ ಶಾಲಾ ನೇಮಕಾತಿ ಹಗರಣದ ಅರಿವಿತ್ತು ಎಂದು ಪ್ರತಿಪಾದಿಸಿದ್ದಾರೆ.
ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ನಿಕಟವರ್ತಿ ಎಂದೇ ಹೆಸರಾಗಿರುವ ಘೋಷ್ ಅವರಿಂದ ಈ ಹೇಳಿಕೆ ಲೋಕಸಭಾ ಚುನಾವಣೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಹೊರಬಿದ್ದಿದೆ. ಚುನಾವಣೆಯಲ್ಲಿ ಎಸ್ಎಸ್ಸಿ ಹಗರಣ ಮಹತ್ತರ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಲೋಕಸಭಾ ಅಭ್ಯರ್ಥಿ ಯೊಬ್ಬರ ಜೊತೆ ವೇದಿಕೆ ಹಂಚಿಕೊಂಡು ಅವರನ್ನು ಹೊಗಳಿದ ಘೋಷ್ ಅವರನ್ನು ಕೆಲ ಗಂಟೆಗಳ ತರುವಾಯ ರಾಜ್ಯ ಕಾರ್ಯದರ್ಶಿ ಹುದ್ದೆಯಿಂದ ವಜಾಗೊಳಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್