ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನಸಹಾಯ ಅರ್ಜಿಗೆ ಆಹ್ವಾನ
ಕೋಲಾರ, ೦೪ ಮೇ (ಹಿ.ಸ) : ಆ್ಯಂಕರ್ : ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿ
ಕಟ್ಟಡ ಕಾರ್ಮಿಕ ಸಂಘಟನೆಯ ಅಧ್ಯಕ್ಷ ಯಲ್ಲಪ್ಪ


ಕೋಲಾರ, ೦೪ ಮೇ (ಹಿ.ಸ) :

ಆ್ಯಂಕರ್ : ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನೋಂದಾಯಿತ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯವನ್ನು ಪ್ರತಿ ವರ್ಷ ನೀಡಲಾಗುತ್ತಿದ್ದು ಅದರಂತೆ, ೨೦೨೩-೨೪ ನೇ ಸಾಲಿನಲ್ಲಿ ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶೈಕ್ಷಣಿಕ ಧನ ಸಹಾಯವನ್ನು ಪಡೆಯಲು ಅರ್ಹ ಫಲಾನುಭವಿಗಳು ನಗರದ ಕೋರ್ಟ್ ವೃತ್ತದ ಬೃಂದಾವನ ಹೋಟಲ್ ಬಳಿಯ ಕೋಲಾರ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಕಛೇರಿಯಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ನಮ್ಮ ಸಂಘದಿ0ದ ಅರ್ಜಿಗಳನ್ನು ಪಡೆದು ಮೇ ೩೧ ರೊಳಗೆ ದಾಖಲೆಗಳ ಸಮೇತ ಕಛೇರಿಯಲ್ಲಿ ಸಲ್ಲಿಸತಕ್ಕದ್ದು ಎಂದು ಸಂಘದ ಜಿಲ್ಲಾ ಗೌರವ ಅಧ್ಯಕ್ಷ ಹೊನ್ನೇನಹಳ್ಳಿ ಯಲ್ಲಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಿತ್ರ : ಕಟ್ಟಡ ಕಾರ್ಮಿಕ ಸಂಘಟನೆಯ ಅಧ್ಯಕ್ಷ ಯಲ್ಲಪ್ಪ


 rajesh pande