ವಿವಿಧ ರಾಜಕೀಯ ಪಕ್ಷಗಳಿಂದ ತೀವ್ರಗೊಂಡ ಪ್ರಚಾರ
ನವದೆಹಲಿ, 4 ಮೇ (ಹಿ.ಸ):ಆ್ಯಂಕರ್ : ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನಕ್ಕೆ ಬಹಿರಂಗ ಪ್ರಚಾರ ನಡೆಸಲು ಇನ್
ವಿವಿಧ ರಾಜಕೀಯ ಪಕ್ಷಗಳಿಂದ ತೀವ್ರಗೊಂಡ ಪ್ರಚಾರ


ನವದೆಹಲಿ, 4 ಮೇ (ಹಿ.ಸ):ಆ್ಯಂಕರ್ :

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನಕ್ಕೆ ಬಹಿರಂಗ ಪ್ರಚಾರ ನಡೆಸಲು ಇನ್ನು ಒಂದು ದಿನ ಮಾತ್ರ ಬಾಕಿ ಇದೆ. ವಿವಿಧ ರಾಜಕೀಯ ಪಕ್ಷಗಳ ನಾಯಕರು ದೇಶದ ವಿವಿಧ ಭಾಗಗಳಲ್ಲಿ ರ್ಯಾಲಿಗಳು ಮತ್ತು ರೋಡ್ ಶೋಗಳನ್ನು ನಡೆಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಬಿಹಾರದ ದರ್ಭಾಂಗದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಬಿಜೆಪಿ ಅಭ್ಯರ್ಥಿ ಗೋಪಾಲ್ ಜೀ ಠಾಕೂರ್ ಬೆಂಬಲಿಸಿ ದರ್ಭಾಂಗ ರಾಜ್ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ. ಮಧ್ಯಾಹ್ನ ೨ ಗಂಟೆ ಸುಮಾರಿಗೆ ಚುನಾವಣಾ ರಾಲಿ ಪ್ರಾರಂಭವಾಗುವ ಸಾಧ್ಯತೆಯಿದೆ. ಆರ್ ಜೆಡಿ ಈ ಕ್ಷೇತ್ರದಿಂದ ಪಕ್ಷದ ಹಿರಿಯ ಮುಖಂಡ ಮತ್ತು ಹಾಲಿ ಶಾಸಕ ಲಲಿತ್ ಕುಮಾರ್ ಯಾದವ್ ಅವರನ್ನು ಕಣಕ್ಕಿಳಿಸಿದೆ. ಇದಕ್ಕೂ ಮುನ್ನ ನರೇಂದ್ರ ಮೋದಿ, ಜಾರ್ಖಂಡ್ ನ ಪಶ್ಚಿಮ ಸಿಂಗ್ ಭಮ್ ಜಿಲ್ಲೆಯ ಚೈಬಾಸಾದಲ್ಲಿ ಸಾರ್ವಜನಿಕ ರಾಲಿಯನ್ನುದ್ದೇಶಿಸಿ ಭಾಷಣ ಮಾಡಿ, ವಿರೋಧ ಪಕ್ಷಗಳ ವಿರುದ್ಧ ಟೀಕಿಸಿದರು. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ , ನಿನ್ನೆ ಉತ್ತರ ಪ್ರದೇಶದ ಮೈನ್ಪುರಿ ಮತ್ತು ಕನೌಜ್ ನಲ್ಲಿ ರಾಜಕೀಯ ಸಭೆಗಳನ್ನುದ್ದೇಶಿಸಿ ಮಾತನಾಡಿದರು.

ಹಿಂದೂಸ್ತಾನ್ ಸಮಾಚಾರ್


 rajesh pande