ನವದೆಹಲಿ, 5 ಮೇ (ಹಿ.ಸ):ಆ್ಯಂಕರ್:ರಾಹುಲ್ ಗಾಂಧಿ ಅವರಿಗೆ ಪಕ್ಷದ ಪ್ರಚಾರ ಕಾರ್ಯದಲ್ಲಿ ಬಹಳ ಇಷ್ಟವಾಗುವ ಸಂಗತಿಗಳೆಂದರೆ ಭಾಷಣ ಮತ್ತು ಪ್ರಚಾರ ಕಾರ್ಯದ ಮುಕ್ತಾಯವಂತೆ. ಅವರೇ ಹಂಚಿಕೊಂಡಿರುವ ವಿಡಿಯೋವೊಂದರಲ್ಲಿ ಅವರು ನೇರಾ ನೇರವಾಗಿ ಮಾತುಗಳನ್ನಾಡಿದ್ದಾರೆ. ರಾಹುಲ್ ಗಾಂಧಿ ಅವರಿಗೆ ಚುನಾವಣಾ ಪ್ರಚಾರ ಕಾರ್ಯಕ್ಕಿಂತ ಭಾರತ್ ಜೋಡೋ ಯಾತ್ರೆ ಹೆಚ್ಚು ಕಷ್ಟಕರವಾಗಿತ್ತು ಎನ್ನುತ್ತಾರೆ. ಎರಡು ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಹಲವು ದಿನಗಳ ಕಾಲ ವಿಶ್ರಾಂತಿ ಇಲ್ಲದಂತೆ ನಿರಂತರವಾಗಿ ಪಾದಯಾತ್ರೆ ಮಾಡುವುದು ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು.
ಈ ವಿಡಿಯೊದಲ್ಲಿ ರಾಹುಲ್ ಗಾಂಧಿ ಅವರು ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯ ಜೊತೆಗೂ ಚಿಟ್ ಚ್ಯಾಟ್ ನಡೆಸಿದ್ದಾರೆ. ಪಕ್ಷಕ್ಕೆ ಅಧಿಕಾರ ಮುಖ್ಯವೋ, ಸಿದ್ಧಾಂತ ಮುಖ್ಯವೋ ಎನ್ನುವ ಪ್ರಶ್ನೆ ಕೇಳಿದ್ದಾರೆ. ಪಕ್ಷಕ್ಕೆ ಅಧಿಕಾರಕ್ಕಿಂತ ಸಿದ್ಧಾಂತ ಮುಖ್ಯ ಎಂದು ಸಿದ್ದರಾಮಯ್ಯ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ. ಪಕ್ಷದ ಸಿದ್ಧಾಂತವನ್ನು ಜನರ ಮುಂದಿಡಬೇಕು. ಅಧಿಕಾರದಲ್ಲಿದ್ದಾಗ ಮಾಡಿದ ಸಾಧನೆಗಳನ್ನು ಜನರ ಮುಂದಿಡಬೇಕು ಎಂದು ಸಿದ್ದರಾಮಯ್ಯ ಹೇಳಿದರು. ರಾಹುಲ್ ಗಾಂಧಿ ಕೂಡ ಇದಕ್ಕೆ ಸಹಮತ ವ್ಯಕ್ತಪಡಿಸಿದರು.
ಹಿಂದೂಸ್ತಾನ್ ಸಮಾಚಾರ್