ಭುವನೇಶ್ವರ, 5 ಮೇ (ಹಿ.ಸ):ಆ್ಯಂಕರ್:ಪ್ರಧಾನಿ ನರೇಂದ್ರ ಮೋದಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಒಡಿಶಾದಲ್ಲಿ ಚುನಾವಣಾ ಪ್ರಚಾರಕ ನಡೆಸುವ ಸಲುವಾಗಿ ಇಂದು ಸಂಜೆ ಭುವನೇಶ್ವರಕ್ಕೆ ಆಗಮಿಸಲಿದ್ದಾರೆ. ಇಂದು ರಾತ್ರಿ ರಾಜಭವನದಲ್ಲಿ ತಂಗಲಿರುವ ಪ್ರಧಾನಿ, ಸೋಮವಾರ ಬೆರ್ಹಾಂಪುರ ಮತ್ತು ನಬರಂಗ್ಪುರ ಸಂಸದೀಯ ಕ್ಷೇತ್ರಗಳಲ್ಲಿ ಎರಡು ರಾಜಕೀಯ ರಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ಅವರ ಆಗಮನದ ಹಿನ್ನೆಲೆಯಲ್ಲಿ ಭುವನೇಶ್ವರ ವಿಮಾನ ನಿಲ್ದಾಣ ಮತ್ತು ರಾಜಭವನದ ಸುತ್ತಮುತ್ತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್