ಹೆಚ್.ಡಿ. ರೇವಣ್ಣ ಬಂಧನ, ಇಂದು ಅಥವಾ ನಾಳೆ ಪ್ರಜ್ವಲ್ ಬೆಂಗಳೂರಿಗೆ ಬರೋ ಸಾಧ್ಯತೆ
ಬೆಂಗಳೂರು, 5 ಮೇ (ಹಿ.ಸ):ಆ್ಯಂಕರ್: ಮಾಜಿ ಸಚಿವ ಹೆಚ್.ಡಿ. ರೇವಣ್ಣ, ಎಸ್ಐಟಿ ಪೊಲೀಸರಿಂದ ಬಂಧನಕ್ಕೊಳಗಾಗಿ ಸಂಕ
 ರೇವಣ್ಣ ಬಂಧನ


ಬೆಂಗಳೂರು, 5 ಮೇ (ಹಿ.ಸ):ಆ್ಯಂಕರ್: ಮಾಜಿ ಸಚಿವ ಹೆಚ್.ಡಿ. ರೇವಣ್ಣ, ಎಸ್ಐಟಿ ಪೊಲೀಸರಿಂದ ಬಂಧನಕ್ಕೊಳಗಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಪ್ಪನ ಬಂಧನದ ಸುದ್ದಿ ತಿಳಿಯುತ್ತಿದ್ದಂತೆ ಅತ್ತ ವಿದೇಶದಲ್ಲಿ ಠಿಕಾಣಿ ಹೂಡಿರೋ ಪ್ರಜ್ವಲ್ ರೇವಣ್ಣ, ಭಾರತದತ್ತ ಮುಖ ಮಾಡಲು ಸಜ್ಜಾಗಿದ್ದಾರೆ ಎನ್ನಲಾಗ್ತಿದೆ. ವಿದೇಶದಿಂದ ಇಂದು ಅಥವಾ ನಾಳೆ ಪ್ರಜ್ವಲ್ ರೇವಣ್ಣ ನೇರವಾಗಿ ಬೆಂಗಳೂರಿಗೆ ಬಂದಿಳಿಯೋ ಸಾಧ್ಯತೆ ಇದೆ.

ವಿದೇಶದಿಂದ ಇಂದು ಅಥವಾ ನಾಳೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರೋ ಪ್ರಜ್ವಲ್ಗೆ ಇರೋದು ಒಂದೇ ದಾರಿ. ಅದು ಶರಣಾಗತಿ. ಹೀಗಾಗಿ ಬೆಂಗಳೂರಿಗೆ ಆಗಮಿಸ್ತಿದ್ದಂತೆ ನೇರವಾಗಿ ಎಸ್ಐಟಿ ಅಧಿಕಾರಿಗಳ ಮುಂದೆ ಪ್ರಜ್ವಲ್ ಹಾಜರಾಗಲಿದ್ದಾಂತೆ. ಈ ಬಗ್ಗೆ ಮಾಹಿತಿ ನೀಡಿರೋ ಮಾಜಿ ಸಚಿವ ಸಿ.ಎಸ್ ಪುಟ್ಟರಾಜು, ಈ ಬಗ್ಗೆ ಸುಳಿವು ನೀಡಿದ್ದಾರೆ.. ಪ್ರಜ್ವಲ್ ಶರಣಾಗ್ತಾರೆ ಅಂತ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande