ಆ್ಯಂಬುಲೆನ್ಸ್ ಚಾಲಕರಿಗೆ ವೇತನ ನೀಡಿ-ಜೆಡಿಎಸ್
ಬೆಂಗಳೂರು, 6 ಮೇ (ಹಿ.ಸ):ಆ್ಯಂಕರ್:ರಾಜ್ಯದ 108 ಆ್ಯಂಬುಲೆನ್ಸ್ ನಲ್ಲಿ ಕಾರ್ಯ ನಿರ್ವಹಿಸುವ ಚಾಲಕರಿಗೆ ವೇತನ
ಆ್ಯಂಬುಲೆನ್ಸ್ ಚಾಲಕರಿಗೆ ವೇತನ ನೀಡಿ-ಜೆಡಿಎಸ್


ಬೆಂಗಳೂರು, 6 ಮೇ (ಹಿ.ಸ):ಆ್ಯಂಕರ್:ರಾಜ್ಯದ 108 ಆ್ಯಂಬುಲೆನ್ಸ್ ನಲ್ಲಿ ಕಾರ್ಯ ನಿರ್ವಹಿಸುವ ಚಾಲಕರಿಗೆ ವೇತನ ಕೊಡಿಸುವಂತೆ ಜೆಡಿಎಸ್ ಆಗ್ರಹಿಸಿದೆ. ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ ಬಾಗಲಕೋಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಷಣ ಮಾಡುತ್ತಾ ರಾಜ್ಯದ ಒಬ್ಬನೇ ಒಬ್ಬ ಸರ್ಕಾರಿ ನೌಕರ ನನ್ನ ಬಳಿ ಬಂದು ಸಂಬಳ ಪಾವತಿಯಾಗಿಲ್ಲ ಎಂದು ಹೇಳಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಗುಡುಗಿದ್ದರು ಎಂದಿದೆ.

ಸಿದ್ದರಾಮಯ್ಯ ಅವರೇ ನೀವು ರಾಜೀನಾಮೆ ನೀಡುವುದು ಯಾವಾಗ? ಕುರ್ಚಿ ಬಿಡುವ ಮೊದಲು ಆ್ಯಂಬುಲೆನ್ಸ್ ಚಾಲಕರಿಗೆ ವೇತನ ಕೊಡಿಸಿ ಎಂದು ಆಗ್ರಹಿಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಜನರಿಗಿಂತ ಜನಪ್ರಿಯತೆಯ ವ್ಯಸನವೇ ಹೆಚ್ಚು. ಬರ ನಿರ್ವಹಣೆಗಿಂತ ಬೇಜವಾಬ್ದಾರಿಯೇ ಜಾಸ್ತಿ ಎಂದು ಟೀಕಿಸಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande