ನವದೆಹಲಿ , 6 ಮೇ (ಹಿ.ಸ):ಆ್ಯಂಕರ್:ಪ್ರಧಾನಿ ಮತ್ತು ಬಿಜೆಪಿಯ ಹಿರಿಯ ನಾಯಕ ನರೇಂದ್ರ ಮೋದಿ ಇಂದು ಓಡಿಶಾದ ಗಂಜಾಂ ಜಿಲ್ಲೆಯ ಗೋಪಾಲ್ ಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕನಿಶಿಯಲ್ಲಿ ಮತ್ತು ನಬರಂಗ್ ಪುರ ಜಿಲ್ಲೆಯ ಚಿಕಿಲಿ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಒಡಿಶಾದಲ್ಲಿ ಚುನಾವಣಾ ಪ್ರಚಾರಕ್ಕಾಗಿ ನಿನ್ನೆ ರಾತ್ರಿ ಭುವನೇಶ್ವರಕ್ಕೆ ಪ್ರಧಾನಿ ಆಗಮಿಸಿದ್ದಾರೆ. ಒಡಿಶಾದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಾಗಿ ಪಕ್ಷದ ಅಭ್ಯರ್ಥಿಗಳ ಪರ ಅವರು ಮತಯಾಚಿಸಲಿದ್ದಾರೆ. ಲೋಕಸಭೆ ಮತ್ತು ಒಡಿಶಾ ವಿಧಾನಸಭೆಗೆ ಚುನಾವಣೆ ಘೋಷಣೆಯಾದ ನಂತರ ಒಡಿಶಾಗೆ ಪ್ರಧಾನಿಯವರ ಮೊದಲ ಭೇಟಿ ಇದಾಗಿದೆ.
ಹಿಂದೂಸ್ತಾನ್ ಸಮಾಚಾರ್