ಬೆಂಗಳೂರು, 6 ಮೇ (ಹಿ.ಸ):ಆ್ಯಂಕರ್:ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ಹಾಗೂ ಗುಲ್ಬರ್ಗಾ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಾಧಾಕೃಷ್ಣ ದೊಡ್ಡಮನಿ ಅವರು ಡಾ.ಬಿ.ಆರ್.ಅಂಬೇಡ್ಕರ್ ಮೆಡಿಕಲ್ ಕಾಲೇಜು ಹಾಗೂ ಎಂ.ಆರ್.ಅಂಬೇಡ್ಕರ್ ಡೆಂಟಲ್ ಕಾಲೇಜುಗಳಲ್ಲಿ ನೂರಾರು ಕೋಟಿ ರೂ.ಗಳ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಅವರು ಸಿಬಿಐಗೆ ದೂರು ನೀಡಿದ್ದಾರೆ.
ದೊಡ್ಡಮನಿ ಅವರು ಡಾ.ಬಿ.ಆರ್.ಅಂಬೇಡ್ಕರ್ ಮೆಡಿಕಲ್ ಕಾಲೇಜ್ ಹಾಗೂ ಎಂ.ಆರ್.ಅಂಬೇಡ್ಕರ್ ಡೆಂಟಲ್ ಕಾಲೇಜುಗಳ ಆಡಳಿತ ಮಂಡಳಿ ಮುಖ್ಯಸ್ಥರಾಗಿದ್ದು ಅವರು ಎಂಬಿಬಿಎಸ್ ಹಾಗೂ ಬಿಡಿಎಸ್ ಪದವಿ ತರಗತಿಗಳ ಅಡಿಷನ್ ಹೆಸರಿನಲ್ಲಿ ಕೋಟ್ಯಂತರ ರೂ.ಅವ್ಯವಹಾರ ನಡೆಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಿಬಿಐಗೆ ಬರೆದಿರುವ 900 ಪುಟಗಳ ದೂರಿನಲ್ಲಿ ಅವರು ಉಲ್ಲೇಖಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್