ತಮ್ಮ ಹಾಗೂ ರೇವಣ್ಣ ಕುಟುಂಬದ ನಡುವೆ ಮನಸ್ತಾಪ ಇಲ್ಲ-ಎಚ್ ಡಿ ಕುಮಾರಸ್ವಾಮಿ
ಬೆಂಗಳೂರು, 7 ಮೇ (ಹಿ.ಸ):ಆ್ಯಂಕರ್:ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಆರೋಪ ಪ್ರತ್ಯಾರೋಪ, ವಾಗ್ಯುದ್ಧಗಳ
 HD Kumaraswamy Reveals Reason 


ಬೆಂಗಳೂರು, 7 ಮೇ (ಹಿ.ಸ):ಆ್ಯಂಕರ್:ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಆರೋಪ ಪ್ರತ್ಯಾರೋಪ, ವಾಗ್ಯುದ್ಧಗಳ ಮಧ್ಯೆ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ದೇವೇಗೌಡರ ಕುಟುಂಬ ಒಡೆದಿದೆ. ರೇವಣ್ಣ ಕುಟುಂಬವನ್ನು ಕುಮಾರಸ್ವಾಮಿ ನಾಶ ಮಾಡಲು ಹೊರಟಿದ್ದಾರೆ ಎನ್ನುವಂತಹ ಕಾಂಗ್ರೆಸ್ ನಾಯಕ ಆರೋಪವನ್ನು ಎಚ್ಡಿಕೆ ತಳ್ಳಿಹಾಕಿದ್ದಾರೆ. ಪ್ರಜ್ವಲ್ ರೇವಣ್ಣ ಅವರನ್ನು ಈ ಬಾರಿ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಮಾಡುವುದು ಬೇಡ ಎಂದು ತಾನು ನಿಲುವು ತೆಗೆದುಕೊಂಡ ಸಂಗತಿಯನ್ನು ಕುಮಾರಸ್ವಾಮಿ ಒಪ್ಪಿಕೊಂಡಿದ್ದಾರೆ. ಆದರೆ, ಆ ನಿಲುವಿಗೆ ಕಾರಣವನ್ನೂ ಬಿಚ್ಚಿಟ್ಟಿದ್ದಾರೆ. ಪ್ರಜ್ವಲ್ ದೊಡ್ಡವರಿಗೆ ಗೌರವ ಕೊಡಲ್ಲ, ಸರಿಯಾಗಿ ನಡೆದುಕೊಳ್ಳುವುದಿಲ್ಲ. ಈ ಬಾರಿ ಕ್ಯಾಂಡಿಡೇಟ್ ಬದಲಿಸಿ ಎಂದು ಕಾರ್ಯಕರ್ತರು ಕೇಳಿದ್ದರು. ಹೀಗಾಗಿ ಪ್ರಜ್ವಲ್ಗೆ ಟಿಕೆಟ್ ಕೊಡುವುದು ಬೇಡ ಎಂದು ತಾನು ನಿರ್ಧರಿಸಿದ್ದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ತಮ್ಮ ಹಾಗೂ ರೇವಣ್ಣ ಕುಟುಂಬದ ನಡುವೆ ಮನಸ್ತಾಪ ಇದೆ ಎನ್ನುವ ಆರೋಪವನ್ನು ತಳ್ಳಿಹಾಕಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande