ಬೆಳಗಾವಿ , 7 ಮೇ (ಹಿ.ಸ):ಆ್ಯಂಕರ್:ರಾಜ್ಯದ ಲೋಕಸಭಾ ಚುನಾವಣೆಯ 2ನೇ ಹಂತದ 14 ಕ್ಷೇತ್ರಗಳಿಗೆ ಇಂದು ಮಂಗಳವಾರ(ಮೇ.7) ಮತದಾನ ನಡೆಯಲಿರುವ ಹಿನ್ನೆಲೆ ಉತ್ತರ ಕರ್ನಾಟಕದ ಶಕ್ತಿ ದೇವತೆ ಯಲ್ಲಮ್ಮ ದೇವಿ ದರ್ಶನ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ದೇವಸ್ಥಾನ. ಪ್ರತಿ ಮಂಗಳವಾರ ರೇಣುಕಾ ಯಲ್ಲಮ್ಮದೇವಿ ದರ್ಶನ ಪಡೆಯಲು ಗುಡ್ಡಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಇಂದು ಲೋಕಸಭಾ ಚುನಾವಣೆಗೆ 2ನೇ ಹಂತದ ಮತದಾನ ನಡೆಯುವ ಹಿನ್ನೆಲೆ ಮತದಾನ ಬಿಟ್ಟು ಭಕ್ತರು ದೇವಸ್ಥಾನಕ್ಕೆ ಬರ್ತಾರೆ ಅಂತಾ ಭೇಟಿಗೆ ನಿಷೇಧ ಹೇರಿದೆ. ದೇವಸ್ಥಾನದ ಮುಂಭಾಗ ಬ್ಯಾರಿಕೇಡ್ ಹಾಕಿರುವ ಪೊಲೀಸರು. ದೇವಸ್ಥಾನದ ಒಳಗಡೆ ಯಾರೂ ಬರದಂತೆ ಬಿಗಿ ಬಂದೋಬಸ್ತ್ ಮಾಡಲಾಗಿದೆ.ಯಲ್ಲಮ್ಮ ದೇವಿಗೆ ಎಂದಿನಂತೆ ಪೂಜಾ ಕಾರ್ಯಗಳು ನಡೆಯಲಿವೆ.
ಹಿಂದೂಸ್ತಾನ್ ಸಮಾಚಾರ್