ಬೆಂಗಳೂರು, 7 ಮೇ (ಹಿ.ಸ):ಆ್ಯಂಕರ್:ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ಇಂದು ರಾತ್ರಿ ಅಥವಾ ನಾಳೆ ಬೆಳಗ್ಗೆ ನಗರಕ್ಕೆ ಬರುವ ನಿರೀಕ್ಷೆಯಿದೆ. ಮೊದಲ ಹಂತದ ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆ ಮುಗಿದ ನಂತರ ಪ್ರಜ್ವಲ್ ರೇವಣ್ಣ ಅವರು ಜರ್ಮನಿಗೆ ತೆರಳಿದ್ದರು.
ಹೊಳೆನರಸೀಪುರ ನಗರ ಠಾಣೆಯಲ್ಲಿ ಪ್ರಜ್ವಲ್ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆಯನ್ನು ಸರ್ಕಾರ ಎಸ್ ಐ ಟಿ ವಹಿಸಿದೆ. ಎಸ್ ಐಟಿ ಅಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಂಡ ರಚಿಸಿಕೊಂಡು ತನಿಖೆ ಕೈಗೊಂಡು ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ಗೆ ನೋಟಿಸ್ ನೀಡಿದ್ದರು.ಪ್ರಜ್ವಲ್ ಪರ ವಕೀಲರು ವಿಚಾರಣೆಗೆ ಕಾಲಾವಕಾಶ ನೀಡುವಂತೆ ಕೋರಿದ್ದರೂ ಎಸ್ ಐ ಟಿ ಅವಕಾಶ ನೀಡಲಿಲ್ಲ. ನಂತರದಲ್ಲಿ ಲುಕ್ ಔಟ್ ನೋಟಿಸ್ ನೀಡಿ, ಪ್ರಜ್ವಲ್ ಎಲ್ಲಿದ್ದಾರೆಂಬ ಬಗ್ಗೆ ಪತ್ತೆಕಾರ್ಯ ಮುಂದುವರೆಸಿದ್ದರು.
ಹಿಂದೂಸ್ತಾನ್ ಸಮಾಚಾರ್