ಮಹನೀಯರ ಜಯಂತಿ : ಕಡ್ಡಾಯ ಹಾಜರಾಗಲು ಸೂಚನೆ
ಕೊಪ್ಪಳ, 9 ಮೇ (ಹಿ.ಸ): ಆ್ಯಂಕರ್: ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕರು ಲೋಕಸಭಾ ಚುನಾವಣೆ ನೀತಿ ಸಂ
ಮಹನೀಯರ ಜಯಂತಿ : ಕಡ್ಡಾಯ ಹಾಜರಾಗಲು ಸೂಚನೆ


ಕೊಪ್ಪಳ, 9 ಮೇ (ಹಿ.ಸ):

ಆ್ಯಂಕರ್: ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕರು ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ಅವಧಿಯಲ್ಲಿ 2024-25ನೇ ಸಾಲಿನ ಮಹನೀಯರ ಜಯಂತಿಗಳನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಣೆ ಮಾಡಲು ತಿಳಿಸಿರುತ್ತಾರೆ.

ಆದ್ದರಿಂದ 2024-25ನೇ ಸಾಲಿನ ಶ್ರೀ ಬಸವ ಜಯಂತಿಯನ್ನು ಹಾಗೂ ಶ್ರೀ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಮೇ 10 ರಂದು, ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಮೇ 12 ರಂದು ಮತ್ತು ಶ್ರೀ ಭಗೀರಥ ಜಯಂತಿಯನ್ನು ಮೇ 14 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುತ್ತಿದೆ.

ಈ ಕಾರ್ಯಕ್ರಮಗಳಿಗೆ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಕಡ್ಡಾಯವಾಗಿ ಹಾಜರಾಗಬೇಕು ಹಾಗೂ ತಮ್ಮ ಅಧೀನ ಕಾರ್ಯಾಲಯಗಳಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಜಯಂತಿಗಳನ್ನು ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ ಅವರು ತಿಳಿಸಿದ್ದಾರೆ.


 rajesh pande