ಪ್ರತಿಭೆಗಳ ಅನಾವರಣ ವೇದಿಕೆ ‘ತಿಂಗಳ ಸೊಬಗು’
ಬಳ್ಳಾರಿ, 21 ಜುಲೈ (ಹಿ.ಸ.) : ಆ್ಯಂಕರ್ : ಜಿಲ್ಲೆಯ ಸ್ಥಳೀಯ ಮಟ್ಟದ ಕಲಾ ಪ್ರತಿಭೆಗಳನ್ನು ಗುರುತಿಸಿ, ಅವರ ಸಾಧನೆಯ ಬೆಳೆವಣಿಗೆ ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿ ತಿಂಗಳ ಮೂರನೆಯ ಶನಿವಾರದಂದು ಆಯೋಜಿಸುವ ‘ತಿಂಗಳ ಸೊಬಗು’ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ. ಕನ್ನಡ ಮತ್ತು ಸಂಸ
ಪ್ರತಿಭೆಗಳ ಅನಾವರಣ ವೇದಿಕೆ ‘ತಿಂಗಳ ಸೊಬಗು’


ಪ್ರತಿಭೆಗಳ ಅನಾವರಣ ವೇದಿಕೆ ‘ತಿಂಗಳ ಸೊಬಗು’


ವಚನ ಯುಗದ ಆಧ್ಯಾತ್ಮಿಕತೆಯ ರೂವಾರಿ ಹಡಪದ ಅಪ್ಪಣ್ಣ: .ಎಸ್.ಮಂಜುನಾಥ


ಬಳ್ಳಾರಿ, 21 ಜುಲೈ (ಹಿ.ಸ.) :

ಆ್ಯಂಕರ್ : ಜಿಲ್ಲೆಯ ಸ್ಥಳೀಯ ಮಟ್ಟದ ಕಲಾ ಪ್ರತಿಭೆಗಳನ್ನು ಗುರುತಿಸಿ, ಅವರ ಸಾಧನೆಯ ಬೆಳೆವಣಿಗೆ ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿ ತಿಂಗಳ ಮೂರನೆಯ ಶನಿವಾರದಂದು ಆಯೋಜಿಸುವ ‘ತಿಂಗಳ ಸೊಬಗು’ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಾಂಸ್ಕೃತಿಕ ಸಮುಚ್ಚಯ ನಿರ್ವಹಣಾ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ಸಂಎ ನಗರದ ಡಾ.ರಾಜಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯ ಆವರಣದ ನಾಡೋಜ ಸುಭದ್ರಮ್ಮ ಮನ್ಸೂರು ಬಯಲು ರಂಗಮಂದಿರದಲ್ಲಿ ಆಯೋಜಿಸಲಾದ `ತಿಂಗಳ ಸೊಬಗು’ ಸಾಂಸ್ಕೃತಿಕ ಕಾರ್ಯಕ್ರಮವು ಕಲಾ ಪ್ರೇಕ್ಷಕರ ಅಸ್ವಾದನೆಗೆ ಸಾಕ್ಷಿಯಾಯಿತು.

ಮೂರು ಸಾವಿರಕ್ಕೂ ಅಧಿಕ ಜಾದು ಕಾರ್ಯಕ್ರಮ ನೀಡಿದ, ಅಂತರಾಷ್ಟ್ರೀಯ ಜಾದು ಪ್ರಶಸ್ತಿಯ ಪುರಸ್ಕೃತ, ಜಾದು ಮಾಂತ್ರಿಕ ರತ್ನ ಎಂದೇ ಪ್ರಸಿದ್ದಿಯಾದ ಬಳ್ಳಾರಿಯ ಪ್ರಕಾಶ ಹೆಮ್ಮಾಡಿ ಅವರ ಜಾನಪದ ಜಾದುವಿನ ಕೈ ಚಳಕಕ್ಕೆ ನೆರೆದಿದ್ದ ಪ್ರೇಕ್ಷಕರು ವಿಸ್ಮಯಗೊಳ್ಳುತ್ತಾ ಚಪ್ಪಾಳೆಯ ಸುರಿಮಳೆಗೈದರು.

ಇವರಿಗೆ ತಮ್ಮ ಧರ್ಮಪತ್ನಿ ನೇತ್ರಾವತಿ ಹೆಮ್ಮಾಡಿಯವರು ಜಾದುವಿಗೆ ಸಹಕಾರ ನೀಡಿದರು. ಇನ್ನೂ ಸಿರುಗುಪ್ಪ ತಾಲ್ಲೂಕಿನ ಧಾತ್ರಿ ರಂಗ ಸಂಸ್ಥೆಯ ‘ಶ್ರೀ ಕೃಷ್ಣ ಸಂಧಾನ’ ಹಾಸ್ಯ ನಾಟಕಕ್ಕೆ ಕಲಾಭಿಮಾನಿಗಳು ಮನಸ್ಸು ಬಿಚ್ಚಿ ನಕ್ಕು ನಲಿದು, ಭರಪೂರ ಮನರಂಜನೆ ಪಡೆದರು.

ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಜುಬೇರ್, ಅಬಕಾರಿ ಇಲಾಖೆಯ ಉಪ ಆಯುಕ್ತ ಮಂಜುನಾಥ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ್ ಸೇರಿದಂತೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್ / ಮನೋಹರ ಯಡವಟ್ಟಿ


 rajesh pande