ಜು.29 ರಂದು ‘ವಿಶ್ವ ಹೆಪಟೈಟಿಸ್ ದಿನಾಚರಣೆ’
ಬಳ್ಳಾರಿ, 26 ಜುಲೈ (ಹಿ.ಸ.) ಆ್ಯಂಕರ್: ಬಳ್ಳಾರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರ ಇವರ ವತಿಯಿಂದ ‘ವಿಶ್ವ ಹೆಪಟೈಟಿಸ್ ದಿನಾಚರಣೆ’ಯನ್ನು ಹಮ್ಮಿಕೊಂಡಿದೆ. `ಹೆಪಟೈಟಿಸ್ ಮತ್ತು ಅದರ ದುಷ್ಪರಿಣಾಮಗಳು’ ವಿಷಯದ ಕು
ಜು.29 ರಂದು ‘ವಿಶ್ವ ಹೆಪಟೈಟಿಸ್ ದಿನಾಚರಣೆ’


ಬಳ್ಳಾರಿ, 26 ಜುಲೈ (ಹಿ.ಸ.)

ಆ್ಯಂಕರ್: ಬಳ್ಳಾರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರ ಇವರ ವತಿಯಿಂದ ‘ವಿಶ್ವ ಹೆಪಟೈಟಿಸ್ ದಿನಾಚರಣೆ’ಯನ್ನು ಹಮ್ಮಿಕೊಂಡಿದೆ.

`ಹೆಪಟೈಟಿಸ್ ಮತ್ತು ಅದರ ದುಷ್ಪರಿಣಾಮಗಳು’ ವಿಷಯದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜುಲೈ 29 ರ ಸೋಮವಾರ ಬೆಳಿಗ್ಗೆ 9.30 ಗಂಟೆಗೆ ನಗರದ ಜಿಲ್ಲಾ ಆಸ್ಪತ್ರೆ ಆವರಣದಿಂದ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಇಂದ್ರಾಣಿ.ವಿ ಅವರು ತಿಳಿಸಿದ್ದಾರೆ.

ಜಾಗೃತಿ ಜಾಥಾವು ಜಿಲ್ಲಾ ಆಸ್ಪತ್ರೆಯ ಆವರಣದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತದವರೆಗೆ ಸಾಗಿ ಮರಳಿ ಜಿಲ್ಲಾ ಅಸ್ಪತ್ರೆ ಆವರಣದವರೆಗೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande