ಬೋಚನಹಳ್ಳಿಯಲ್ಲಿ ದಲಿತ ಯುವಕನ ಮೇಲೆ ಹಲ್ಲೆ, ದಲಿತ ವರ್ಗದ ಮೂವರ ಬಂಧನ
ಕೊಪ್ಪಳ, 14 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಬೋಚನಹಳ್ಳಿ ಗ್ರಾಮದ ಸಾರ್ವಜನಿಕ ಪ್ರದೇಶದಲ್ಲಿ ಸಿಗರೇಟು ಸೇದಿದ್ದ ಎನ್ನಲಾದ ಕಾರಣಕ್ಕಾಗಿ ಆಕ್ರೋಶದಿಂದ ಯುವಕರು ದಲಿತ ಯುವಕನನ್ನು ಗ್ರಾಮದ ಲೈಟ್ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ ಕಾರಣ ಅಳವಂಡಿ ಪೊಲೀಸರು ಮೂವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ
ಬೋಚನಹಳ್ಳಿಯಲ್ಲಿ ದಲಿತ ಯುವಕನ ಮೇಲೆ ಹಲ್ಲೆ, ದಲಿತ ವರ್ಗದ ಮೂವರ ಬಂಧನ


ಕೊಪ್ಪಳ, 14 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಬೋಚನಹಳ್ಳಿ ಗ್ರಾಮದ ಸಾರ್ವಜನಿಕ ಪ್ರದೇಶದಲ್ಲಿ ಸಿಗರೇಟು ಸೇದಿದ್ದ ಎನ್ನಲಾದ ಕಾರಣಕ್ಕಾಗಿ ಆಕ್ರೋಶದಿಂದ ಯುವಕರು ದಲಿತ ಯುವಕನನ್ನು ಗ್ರಾಮದ ಲೈಟ್ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ ಕಾರಣ ಅಳವಂಡಿ ಪೊಲೀಸರು ಮೂವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

ಹಲ್ಲೆಗೊಳಗಾದ ಯುವಕ ಗುಡ್ಡದಪ್ಪ ಮಲ್ಲಣ್ಣ (21). ಈತನು ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಸಿಗರೇಟು ಸೇದಿದ್ದಾನೆ ಎನ್ನುವ ಕಾರಣಕ್ಕಾಗಿ ದಲಿತ ವರ್ಗದ ಮತ್ತೊಂದು ಗುಂಪಿನ ಮೂವರು ಯುವಕರನ್ನು ಬಂಧಿಸಲಾಗಿದ್ದು, ಇನ್ನೂ ಮೂವರನ್ನು ಹುಡುಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿದೂರು :

ಹಲ್ಲೆ ಈ ಘಟನೆಯಲ್ಲಿ ಗಾಯಗೊಂಡ ಮತ್ತೊಬ್ಬ ಯುವಕ ನಾಗನಗೌಡ ಪೊಲೀಸ್ ಪಾಟೀಲ್ ಗುಡ್ಡದಪ್ಪ ಮತ್ತು ಆತನ ಕುಟುಂಬದ ವಿರುದ್ಧ ಪ್ರತಿ ದೂರು ದಾಖಲಿಸಿ, ಗುಡ್ಡದಪ್ಪ ಮಲ್ಲಣ್ಣ ಮತ್ತು ಅವನ ಕುಟುಂಬಸ್ಥರು ಜೀವಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾನೆ. ಅಳವಂಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಲಾಗಿದೆ. ತನಿಖೆ ನಡೆದಿದೆ

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande