ಚಿತ್ತೂರು, 14 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಭೀಕರ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ ಘಟನೆ ಆಂಧ್ರದ ಚಿತ್ತೂರು ಬಳಿ ನಡೆದಿದೆ. ಅಪಘಾತದಲ್ಲಿ 30 ಪ್ರಯಾಣಿಕರು ಗಾಯಗೊಂಡಿದ್ದಾರೆ. ಚಿತ್ತೂರು -ಬೆಂಗಳೂರು ಹೆದ್ದಾರಿಯ ಮೊಗಲಿ ಘಾಟ್ ಬಳಿ ಎಪಿಎಸ್ಆರ್ಟಿಸಿ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೃತರಲ್ಲಿ ಬಹುತೇಕರು ಬೆಂಗಳೂರಿನವರು ಎನ್ನಲಾಗಿದೆ.
ಪ್ರಯಾಣಿಕರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಬಸ್ನಲ್ಲಿ ವಾಪಸ್ ತೆರಳುವ ವೇಳೆ ದುರ್ಘಟನೆ ನಡೆದಿದೆ. ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಎಪಿಎಸ್ಆರ್ಟಿಸಿ ಬಸ್ ಅಪಘಾತಕ್ಕೀಡಾಗಿದೆ. ಬಸ್ ನಿಯಂತ್ರಣ ಕಳೆದುಕೊಂಡು ಟ್ರಕ್ ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಪಲಮನೇರು ಆಸ್ಪತ್ರೆಗೆ ದಾಖಲಿಸಲಾಗಿದೆ. ದುರ್ಘಟನೆ ಬಗ್ಗೆ ತಿಳಿದ ಚಂದ್ರಬಾಬು ನಾಯ್ಡು ಮೃತ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್