ಧಾರವಾಡಕ್ಕೆ ಖ್ಯಾತ ತೆಲಗು ನಟ ಶ್ರೀಕಾಂತ ಭೇಟಿ
ಧಾರವಾಡ, 15 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ತೆಲಗು ಚಿತ್ರರಂಗದ ಖ್ಯಾತ ನಟ ಶ್ರೀಕಾಂತ ಇಂದು ಧಾರವಾಡಕ್ಕೆ ಭೇಟಿ ನೀಡಿ ತಮ್ಮ ಹಳೆಯ ಗೆಳೆಯರನ್ನು ಭೇಟಿ ಮಾಡಿದರು. ಮೂಲತಃ ಕೊಪ್ಪಳ ಜಿಲ್ಲೆಯ ಗಂಗಾವತಿಯವರಾದ ಶ್ರೀಕಾಂತ್, ಧಾರವಾಡದ ಸಿಎಸ್‌ಐ ಕಾಲೇಜಿನಲ್ಲಿ ವಾಣಿಜ್ಯ ಪದವಿ ಪಡೆದಿದ್ದಾರೆ. ಇಂದು ಬೆಂಗಳ
Actor visit


Actor visit


Actor visit


ಧಾರವಾಡ, 15 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ತೆಲಗು ಚಿತ್ರರಂಗದ ಖ್ಯಾತ ನಟ ಶ್ರೀಕಾಂತ ಇಂದು ಧಾರವಾಡಕ್ಕೆ ಭೇಟಿ ನೀಡಿ ತಮ್ಮ ಹಳೆಯ ಗೆಳೆಯರನ್ನು ಭೇಟಿ ಮಾಡಿದರು. ಮೂಲತಃ ಕೊಪ್ಪಳ ಜಿಲ್ಲೆಯ ಗಂಗಾವತಿಯವರಾದ ಶ್ರೀಕಾಂತ್, ಧಾರವಾಡದ ಸಿಎಸ್‌ಐ ಕಾಲೇಜಿನಲ್ಲಿ ವಾಣಿಜ್ಯ ಪದವಿ ಪಡೆದಿದ್ದಾರೆ. ಇಂದು ಬೆಂಗಳೂರಿನಿಂದ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದ ಅವರು, ತಮ್ಮ ಸ್ವಂತ ಊರು ಗಂಗಾವತಿಗೆ ಹೊರಟಿದ್ದರು. ಈ ವೇಳೆ, ಧಾರವಾಡದ ತಮ್ಮ ಸ್ನೇಹಿತ ಉಪವನ ಹೋಟೆಲ್ ಮಾಲೀಕರಾದ ದಿನೇಶ ಶೆಟ್ಟಿ ಅವರ ಮನೆಗೆ ಭೇಟಿ ನೀಡಿ ಅವರ ಮನೆಯಲ್ಲೇ ಬೆಳಗಿನ ಉಪಹಾರ ಸೇವಿಸಿದ್ದಾರೆ. ನಂತರ ತಮ್ಮ ಹಳೆಯ ಗೆಳೆಯರೊಂದಿಗೆ ಕೆಲ ಸಮಯ ಕಳೆದು ಗಂಗಾವತಿಗೆ ತೆರಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande